ದಾವಣಗೆರೆ: ನ್ಯಾಷನಲ್ ಹೆರಾಲ್ಡ್ ಪ್ರಕರಣ ತನಿಖೆ ಆಗಬಾರದು ಎಂಬುದು ಕಾಂಗ್ರೆಸ್ ಉದ್ದೇಶ. ನ್ಯಾಯಾಂಗ ವ್ಯವಸ್ಥೆ ಮೇಲೆ ಭರವಸೆ ಇದ್ದಿದ್ದರೆ ಕಾಂಗ್ರೆಸ್ ತನಿಖೆ ಎದುರಿಸಬೇಕಿತ್ತು ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.
ಜಿಲ್ಲೆಯ ಹಳೇ ಬಿಸಲೇರಿಯಲ್ಲಿ ಸುದ್ದಿಗಾರರ ಜತೆಗೆ ಅವರು,ಭ್ರಷ್ಟಾಚಾರ ನಡೆದಿರುವುದು ಪ್ರಾಥಮಿಕ ಹಂತದಲ್ಲಿದೆ ಕಂಡು ಬರುತ್ತದೆ. ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದು ದೌರ್ಭಾಗ್ಯ.ಈ ತನಿಖೆ ದಿಕ್ಕು ತಪ್ಪಿಸಲು ಪ್ರತಿಭಟನೆ ನಡೆಯುತ್ತಿದೆ ಎಂದರು.
ಈ ಹಿಂದೆ ಕಾಂಗ್ರೆಸ್, ಬಿಜೆಪಿ ಮೇಲೆ ಪ್ರಕರಣ ದಾಖಲಿಸಿತ್ತು. ಮೋದಿ, ಅಮಿತ್ ಶಾ ವಿಚಾರಣೆ ಎದುರಿಸಿದ್ದರು. ಗುಜರಾತ್ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಸತತ 10 ಗಂಟೆ ಕಾಲ ವಿಚಾರಣೆ ಎದುರಿಸಿದ್ದರು. ಕಾಂಗ್ರೆಸ್ ಕೂಡ ಭ್ರಷ್ಟಾಚಾರ ಮಾಡಿಲ್ಲ ಅಂದ್ರೆ ತನಿಖೆಗೆ ಒಳಗಾಗಲಿ. ಭ್ರಷ್ಟಾಚಾರ ಮಾಡಿದ್ದರೆ ಸಾಮಾನ್ಯರಂತೆ ಶಿಕ್ಷೆ ಅನುಭವಿಸಲಿ.ಈ ದೇಶ ಗಾಂಧಿ ಕುಟುಂಬದ ಸೂಚನೆಯಂತೆ ನಡೆಯುವುದಲ್ಲ, ಸಂವಿಧಾನದ ಪ್ರಕಾರ ನಡೆಯಬೇಕು ಎಂದರು.



