ದಾವಣಗೆರೆ: ಕೊಂಡಜ್ಜಿ ಬಸಪ್ಪ ರಾಜ್ಯ ಸ್ಕೌಟ್ ಗೈಡ್ ತರಬೇತಿ ಕೇಂದ್ರದಲ್ಲಿ ರಾಜ್ಯ ಪುರಸ್ಕಾರ ತರಬೇತಿ ಶಿಬಿರ ಯಶಸ್ವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕೊಂಡಜ್ಜಿಯ ಕೊಂಡಜ್ಜಿ ಬಸಪ್ಪ ರಾಜ್ಯ ಸ್ಕೌಟ್ ಗೈಡ್ ತರಬೇತಿ ಕೇಂದ್ರದಲ್ಲಿ ಇತ್ತೀಚೆಗೆ ರಾಜ್ಯ ಪುರಸ್ಕಾರ ಪೂರ್ವಭಾವಿ ತರಬೇತಿ ಶಿಬಿರವನ್ನು ಆಯೋಜಿಸಲಾಗಿತ್ತು.

ಈ ಶಿಬಿರದಲ್ಲಿ 94 ಸ್ಕೌಟ್ಸ್ ಮತ್ತು 92 ಗೈಡ್ಸ್‍ಗಳು ಭಾಗವಹಿಸಿದ್ದರು. ಸ್ಕೌಟ್ ವಿಭಾಗದ ನಾಯಕರಾಗಿ ಹಾಲಪ್ಪ.ಡಿ ಜಿಲ್ಲಾ ತರಬೇತಿ ಆಯುಕ್ತರು ಸ್ಕೌಟ್ ಹಾಗೂ ಗೈಡ್ ವಿಭಾಗದ ನಾಯಕರಾಗಿ ರತ್ನ.ಎಂ ಜಿಲ್ಲಾ ಕಾರ್ಯದರ್ಶಿಗಳು ಕಾರ್ಯನಿರ್ವಹಿಸಿದರು. ಇವರಿಗೆ ಸಹಾಯಕರುಗಳಾಗಿ ಸುವರ್ಣಮ್ಮ, ಗೀತಾ.ಟಿ.ಕೆ.ಪಿ, ತಾಸಿನ್ ತಾಜ್, ಮಂಜುಳ, ಜೆ.ಎಸ್.ವಿಜಯ್, ಗಂಗಾಧರ್ ಸ್ವಾಮಿ, ಆರೋಗ್ಯಮ್ಮ, ಕೊಟ್ರಯ್ಯ, ಸೌಮ್ಯನಾಯಕ್, ಮಹಾಂತೇಶ್ ಕಾರ್ಯನಿರ್ವಹಿಸಿದರು.

ಶಿಬಿರಕ್ಕೆ ಜಿಲ್ಲಾ ಮುಖ್ಯ ಆಯುಕ್ತ ಮುರುಘರಾಜೇಂದ್ರ ಜೆ. ಚಿಗಟೇರಿ, ಜಿಲ್ಲಾ ಸ್ಕೌಟ್ ಆಯುಕ್ತ ಎ.ಪಿ.ಷಡಾಕ್ಷರಪ್ಪ, ಹಾಲಪ್ಪ ಜಿಲ್ಲಾ ಸಹಾಯಕ ಆಯುಕ್ತರು ಭೇಟಿ ನೀಡಿ ಮಕ್ಕಳನ್ನು ಪ್ರೋತ್ಸಾಹಿಸಿದರು. ಖಾಲಿದ್ ಅರಣ್ಯಾಧಿಕಾರಿಗಳು ಶಿಬಿರಕ್ಕೆ ಭೇಟಿ ನೀಡಿ ಪರಿಸರ ರಕ್ಷಣೆ ಮತ್ತು ಕಾಡುಗಳನ್ನು ಬೆಳಿಸುವ ಬಗ್ಗೆ ಹಾಗೂ ಬೀಜದುಂಡೆ ತಯಾರಿಕೆ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಿದರು. ಕ್ವಾಟರ್ ಮಾಸ್ಟರ್ ಆಗಿ ಸಿ.ಆರ್.ಮರುಳಪ್ಪ ಮತ್ತು ಸುಖವಾಣಿ ಜಿಲ್ಲಾ ಜಂಟಿ ಕಾರ್ಯದರ್ಶಿಗಳು ಕಾರ್ಯನಿರ್ವಹಿಸಿದರು. ಅಶ್ವಿನಿ.ಜೆ ಎಸ್.ಜಿ.ವಿ ಶಿಬಿರವನ್ನು ಸಂಘಟಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *