Connect with us

Dvgsuddi Kannada | online news portal | Kannada news online

ದಾವಣಗೆರೆ: ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯ ವಿದ್ಯುತ್ ಬಾಕಿ ವಸೂಲಿ ಕೈಬಿಡಲು ಮನವಿ

IMG 20220619 WA0001 696x338 1

ದಾವಣಗೆರೆ

ದಾವಣಗೆರೆ: ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಯೋಜನೆಯ ವಿದ್ಯುತ್ ಬಾಕಿ ವಸೂಲಿ ಕೈಬಿಡಲು ಮನವಿ

ದಾವಣಗೆರೆ: ಸರ್ಕಾರದ ಯೋಜನೆಗಳಾದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಹೊಸಬೆಳಕು ಯೋಜನೆಯ ವಿದ್ಯುತ್ ಬಾಕಿ ವಸೂಲಿಯನ್ನು ಕೈಬಿಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಬೇವಿನಹಳ್ಳಿ ಮಹೇಶ್ ಆಗ್ರಹಿಸಿದ್ದಾರೆ.

ಈ ಯೋಜನೆಗಳಡಿ 60 ಸಾವಿರದಿಂದ 80 ಸಾವಿರ ರೂಪಾಯಿವರೆಗೆ ಬಿಲ್ ಬಂದಿದ್ದು, ಇದರಿಂದ ಬಡವರು ಕಂಗಾಲಾಗಿದ್ದಾರೆ. ಈ ಯೋಜನೆಗಳಲ್ಲಿ ಭಾರೀ ಭ್ರಷ್ಟಾಚಾರ ನಡೆದಿದ್ದು, ಕೂಡಲೇ ತನಿಖೆಗೆ ಒಳಪಡಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಭಾಗ್ಯಜ್ಯೋತಿ ಹಗರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಭ್ರಷ್ಟಾಚಾರದ ಹಣವನ್ನು ಮುಟ್ಟುಗೋಲು ಹಾಕಿಕೊಂಡು ಆ ಹಣವನ್ನು ಭಾಗ್ಯಜ್ಯೋತಿ ಹಣಕ್ಕೆ ತುಂಬಬೇಕು. ಅಧಿಕಾರಿಗಳು ತಪ್ಪುಲೆಕ್ಕ ಕೊಡುತ್ತಿದ್ದು, ಈ ಬಗ್ಗೆಯೂ ತನಿಖೆ ನಡೆಸಬೇಕು ಎಂದರು. ರೈತಮುಖಂಡರಾದ ಮಲ್ಲಾಪುರ ದೇವರಾಜ್, ಗುಡದಯ್ಯ, ನವೀನ್, ಹಾಲೇಶ್, ರೇವಣಸಿದ್ದಪ್ಪ, ಭಾಷ ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top