ದಾವಣಗೆರೆ: ಸ್ವಯಂ ಉದ್ಯೋಗ ಕೈಗೊಳ್ಳಲು 30 ಸಾವಿರ ಸಹಾಯ ಧನಕ್ಕೆ ಅರ್ಜಿ ಆಹ್ವಾನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2022-23 ನೇ ಸಾಲಿನ ಸ್ವಯಂ ಉದ್ಯೋಗ ಕೈಗೊಳ್ಳಲು ಈಗಾಗಲೇ ಸರ್ಕಾರದ ಯಾವುದೇ ಯೋಜನೆಯಡಿ ಸಹಾಯಧನ ಪಡೆಯದೇ ಇರುವ ಮಾಜಿ ದೇವದಾಸಿ ಮಹಿಳೆಯರಿಗೆ ಪ್ರತಿ ಫಲಾನುಭವಿಗಳಿಗೆ ರೂ.30,000 ಸಹಾಯಧನ ಮಂಜೂರು ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

ದೇವದಾಸಿ ಪುನರ್ವಸತಿ ಯೋಜನೆಯ ಆಯಾ ತಾಲ್ಲೂಕಿನ ಯೋಜನಾ ಅನುಷ್ಠಾನಾಧಿಕಾರಿಗಳಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 8 ರಂದು ಕಛೇರಿ ವೇಳೆಯ ಒಳಗೆ ಸಲ್ಲಿಸಬಹುದಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಮತ್ತು ಮಧ್ಯವರ್ತಿಗಳಿಂದ ಬಂದ ಅರ್ಜಿಗಳನ್ನು ಹಾಗೂ ಆಪೂರ್ಣ ಮಾಹಿತಿ ಇರುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು,
ಸಹಾಯಧನ ಮಂಜೂರಾತಿಗಾಗಿ ಚಾಲ್ತಿಯಲ್ಲಿರುವ ಬ್ಯಾಂಕ್ ಪಾಸ್ ಪುಸ್ತಕ, ವಿಳಾಸದ ಪರವಾಗಿ ಗುರುತಿನ ಚೀಟಿ, ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಹಾಗು 4 ಭಾವಚಿತ್ರದೊಂದಿಗೆ ನಿಗದಿಪಡಿಸಿದ ಅರ್ಜಿನಮೂನೆಯಲ್ಲಿ ದ್ವಿ ಪ್ರತಿಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಪ್ರಜ್ಞಾ ಪಾಟೀಲ್ ದಾವಣಗೆರೆ 9886440107, ಉಮಾದೇವಿ ಎಮ್.ಜೆ ಹರಿಹರ, ಚನ್ನಗಿರಿ, ಹೊನ್ನಾಳಿ 9164133372, ಕುಸುಮಾ ಬಿ.ಸಿ 7676932625 ಗೆ ಸಂಪರ್ಕಿಸಬಹುದು ಎಂದು ದೇವದಾಸಿ ಪುನರ್ವಸತಿ ಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *