Connect with us

Dvgsuddi Kannada | online news portal | Kannada news online

ದಾವಣಗೆರೆ: ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬ ತಹಶೀಲ್ದಾರ್ ಕಚೇರಿ ಮುಂದೆ ಆತ್ಮಹತ್ಯೆ ಯತ್ನ

images 19

ದಾವಣಗೆರೆ

ದಾವಣಗೆರೆ: ಜಮೀನು ವಿವಾದ ಹಿನ್ನೆಲೆ ವ್ಯಕ್ತಿಯೊಬ್ಬ ತಹಶೀಲ್ದಾರ್ ಕಚೇರಿ ಮುಂದೆ ಆತ್ಮಹತ್ಯೆ ಯತ್ನ

ದಾವಣಗೆರೆ: ಸಹೋದರರ ನಡುವಿನ ಜಮೀನು ವಿವಾದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ತಹಶೀಲ್ದಾರ್ ಕಚೇರಿ ಮುಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕು ಕಚೇರಿ‌ಮುಂದೆ ಈ ಘಟನೆ ನಡೆದಿದ್ದು, ಶಿವಮೊಗ್ಗ ತಾಲೂಕಿನ ನಾರಾಯಣಪುರ ಗ್ರಾಮದ ಪಂಚಾಯತ್​ ಸದಸ್ಯ ಲೋಕೇಶ್ ನಾಯ್ಕ್ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯಾಗಿದ್ದಾನೆ. ನ್ಯಾಮತಿ ತಾಲೂಕಿನ ಲಕ್ಕಿನಕೊಪ್ಪ ಗ್ರಾಮದಲ್ಲಿರುವ 4 ಎಕರೆ ಜಮೀನು ವಿಚಾರವಾಗಿ ಲೋಕೇಶ್ ನಾಯ್ಕ್ ಹಾಗೂ ಸಹೋದರ ಮಧ್ಯೆ ವ್ಯಾಜ್ಯವಿತ್ತು. ಈ ವ್ಯಾಜ್ಯ ನ್ಯಾಮತಿ ತಹಶೀಲ್ದಾರ್ ಕೋರ್ಟ್​ನಲ್ಲಿ ಇಂದು ವಿಚಾರಣೆ ನಡೆಸಿ ತೀರ್ಪು ನೀಡಲಾಯಿತು. ತನ್ನ ಪರವಾಗಿ ತೀರ್ಪು ಬರಲಿಲ್ಲ ಎಂಬ ಕಾರಣಕ್ಕೆಲೋಕೇಶ್ ತಹಶೀಲ್ದಾರ್ ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರು.

ಅಲ್ಲೇ ಇದ್ದ ಜನರು ಆತ್ಮಹತ್ಯೆಗೆ ಯತ್ನಿಸಿದ ಲೋಕೆಶ್​ನನ್ನು ತಡೆದು ಕೂಡಲೇ ಆಸ್ಪತ್ರೆಗೆ ದಾಕಲಿಸಿದ್ದಾರೆ. ಸ್ಥಳಕ್ಕೆ ನ್ಯಾಮತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top