ದಾವಣಗೆರೆ: ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ನಾಳೆ (ಜೂ,. 28) ದಾವಣಗೆರೆ ಆಗಮಿಸಲಿದ್ದಾರೆ.
ಜೂ.28 ರಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನಿಂದ ಹೊರಟು ಬೆ.9.45ಕ್ಕೆ ಜಿ.ಎಂ.ಐ.ಟಿ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದಲ್ಲಿರುವ ದಾವಣಗೆರೆ ಸ್ಮಾರ್ಟ್ ಸಿಟಿ ಲಿ., ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ ಬೆಳಿಗ್ಗೆ 11 ಗಂಟೆಗೆ ತ್ರಿಶೂಲ್ ಕಲಾಭವನ, ಪಿ.ಬಿ ರಸ್ತೆ ಇಲ್ಲಿ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಇದರ ನೂತನ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬೆ.11.45ಕ್ಕೆ ದೇವರಾಜ್ ಅರಸು ಬಡಾವಣೆಯಯಲ್ಲಿರುವ ಅಂಧ ಮಕ್ಕಳ ಶಾಲೆಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರೆಂದು ಅವರ ಅಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



