ದಾವಣಗೆರೆ: ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಗ್ರಾಮ ಲೆಕ್ಕಾಧಿಕಾರಿಗಳ ಸಂಘ ಸಂಯುಕ್ತಾಶ್ರಯದಲ್ಲಿ ಕಂದಾಯ ದಿನಾಚರಣೆ ಅಂಗವಾಗಿ ಸಸಿ ನೆಡುವ ಹಾಗೂ ಅರಣ್ಯ ಇಲಾಖೆಯ ವನಮಹೋತ್ಸವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಹುಲ್ಲುಮನಿ ತಿಮ್ಮಣ್ಣ, ದಾವಣಗೆರೆ ತಹಶೀಲ್ದಾರ್ ಬಸವನಗೌಡ ಕೋಟೂರ, ಹೊನ್ನಾಳಿ ತಹಶೀಲ್ದಾರ್ ರಶ್ಮಿ, ನ್ಯಾಮತಿ ತಹಶೀಲ್ದಾರ್ ರೇಣುಕಾ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಹನ್ ಕುಮಾರ್, ವಲಯ ಅರಣ್ಯಾಧಿಕಾರಿ ದೇವರಾಜ್, ಉಪ ವಲಯ ಅರಣ್ಯಾಧಿಕಾರಿ ಇದಾಯತ್ ಸೇರಿದಂತೆ ಜಿಲ್ಲಾಡಳಿತದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.



