ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಸದಸ್ಯ ಜೆ.ಎನ್. ಶ್ರೀನಿವಾಸ್ ಮಂಗೋಲಿಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಭಾರತ ಪ್ರತಿನಿಧಿಸಲಿದ್ದಾರೆ.
ಪವರ್ ಲಿಫ್ಟಿಂಗ್ ಕ್ರೀಡಾಪಟು ಜೆ. ಎನ್ . ಶ್ರೀನಿವಾಸ್ ರವರು ಇಂದು ಹೈದ್ರಾಬಾದ್ ನಲ್ಲಿ ನಡೆದ ಬೆಂಚ್ ಪ್ರೆಸ್ ಟ್ರಯಲ್ಸ್ ನಲ್ಲಿ ಆಯ್ಕೆಯಾಗಿದ್ದು, ಇದೇ ವರ್ಷ ಮಂಗೋಲಿಯಾದಲ್ಲಿ ನಡೆಯಲಿರುವ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಅಂತಾರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟುಗಳಾದ ಕೆ ಗಂಗಪ್ಪ, ಎಚ್ ದಾದಾಪೀರ್, ಪವರ್ ಲಿಫ್ಟಿಂಗ್ ತರಬೇತಿದಾರ ಕೆ ಕುಮಾರ್ ಹಾಗೂ ಸಮಸ್ತ ಜಿಲ್ಲಾ ಪವರ್ ಲಿಫ್ಟಿಂಗ್ ಕ್ರೀಡಾಪಟುಗಳು ಶುಭಕೋರಿದ್ದಾರೆ.



