ದಾವಣಗೆರೆ: ತುಂಗಾಭದ್ರಾ ನದಿ ಪ್ರವಾಹ ಪೀಡಿತ ಕಾಳಜಿ ಕೇಂದ್ರಕ್ಕೆ ನೂತನ ಡಿಸಿ ಭೇಟಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜೆಲ್ಲೆಯ ಹರಿಹರ ಪಟ್ಟಣದ ಪ್ರವಾಹ ಪೀಡಿತ ಪ್ರದೇಶವಾಗಿರುವ ಗಂಗಾನಗರ, ಕೈಲಾಸ ನಗರ, ಬೆಂಕಿನಗರ ಪ್ರದೇಶಗಳಿ ನಿವಾಸಿಗಳ ಕಾಳಜಿ ಕೇಂದ್ರಕ್ಕೆ ನೂತನ ಜಿಲ್ಲಾ ಅಧಿಕಾರಿ ಶಿವಾನಂದ್ ಕಪಾಶಿ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆ ಆಲಿಸಿದರು.

ತುಂಗಭದ್ರಾ ನದಿಯ ನೀರಿನ ಹರಿವಿನ ಮಟ್ಟ ಹೆಚ್ಚಿನ ಪ್ರಮಾಣದಲ್ಲಿ ಇರುವುದರಿಂದ ಗಂಗಾ ನಗರದ ನಿವಾಸಿಗಳಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮಿನಲ್ಲಿ ಕಾಳಜಿ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ನದಿಯ ನೀರು ನುಗ್ಗುವ ಪ್ರದೇಶದ ನಿವಾಸಿಗಳಿಗೆ ಶಾಶ್ವತ ಪರಿಹಾರಕ್ಕೆ ಶೀಘ್ರ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ತಾಲ್ಲೂಕುಮಟ್ಟದ ಅಧಿಕಾರಿಗಳ ಬಳಿ ಸಮಗ್ರವಾಗಿ ಮಾಹಿತಿಯನ್ನು ಪಡೆದು ಮುಂದಿನ ದಿನಗಳಲ್ಲಿ ಸಮಸ್ಯೆ ಬಗೆಹರಿಸುವುದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದರು. ಶ್ರೀ ಹರಿಹರೇಶ್ವರ ಸ್ವಾಮಿ, ಲಕ್ಷ್ಮಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ನಂತರ ತಹಶೀಲ್ದಾರ್ ಮತ್ತು ಪೌರಾಯುಕ್ತರೊಂದಿಗೆ ಮಳೆ ಮತ್ತು ಇತರ ಸಮಸ್ಯೆಗಳ ಬಗ್ಗೆ ಮಾಹಿತಿಯನ್ನು ಪಡೆದರು.ಈ ವೇಳೆ ತಾಲ್ಲೂಕು ದಂಡಾಧಿಕಾರಿ ಡಾ ಎಂಬಿ ಅಶ್ವತ್ಥ್ .ನಗರಸಭೆ ಪೌರಾಯುಕ್ತ ಬಸವರಾಜ್ ಐಗೂರು, ನಗರಸಭಾ ಅಧ್ಯಕ್ಷೆ ಶಾಹೀನಾ ಬಾನು ದಾದಾಪೀರ್ ಬಾನುವಳ್ಳಿ, ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಸಮೀರ್ ಅಹ್ಮದ್, ಗ್ರಾಮಲೆಕ್ಕಾಧಿಕಾರಿ ಮಲ್ಲಿಕಾರ್ಜುನ್. ದೇವರಾಜ್, ಕಂದಾಯ ಇಲಾಖೆ ನಗರಸಭೆ ಸಿಬ್ಬಂದಿ ವರ್ಗದವರು ಇದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *