ದಾವಣಗೆರೆ: ಕುವೆಂಪು ಕನ್ನಡ ಭವನದಲ್ಲಿ ರಾಷ್ಟ್ರ ಧ್ವಜ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ನಗರದ ಕುವೆಂಪು ಕನ್ನಡ ಭವನದಲ್ಲಿ ರಾಷ್ಟ್ರಧ್ವಜವನ್ನು 22 ರೂಪಾಯಿ  ನೀಡಿ ಪಡೆಯಬಹುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ವಾಮದೇವಪ್ಪ  ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಗಸ್ಟ್  13, 14 ಮತ್ತು 15 ನೇ ರಂದು ಭಾರತ ದೇಶ ಸ್ವತಂತ್ರ ಪಡೆದು 75 ವರ್ಷಗಳು ತುಂಬುತ್ತಿರುವ ಈ ಶುಭ ಸಂದರ್ಭದಲ್ಲಿ ದೇಶದ ಅಮೃತ ಮಹೋತ್ಸವದ ಸಂಕೇತವಾಗಿ ಆ: 13 ರ  ಬೆಳಿಗ್ಗೆ 6:00 ಗಂಟೆ ಯಿಂದ  ಆ 15 ರ ಸಂಜೆ 6:00 ಗಂಟೆ  ವರೆಗೆ ನಿರಂತರವಾಗಿ ರಾಷ್ಟ್ರಧ್ವಜ ಹಾರಿಸುವಂತಹ ಅವಕಾಶವನ್ನು ಪ್ರತಿಯೊಬ್ಬರಿಗೂ ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳು ಕಲ್ಪಿಸಿಕೊಟ್ಟವೆ. ಇದು ದೇಶಾಭಿಮಾನದ ಪ್ರಶ್ನೆ ಅಷ್ಟೇ ಅಲ್ಲ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ – ಬಲಿದಾನ ಮಾಡಿದವರನ್ನು ಸ್ಮರಿಸುವಂತಹ ಕೆಲಸವನ್ನು ಪ್ರತಿಯೊಬ್ಬ ಭಾರತೀಯನು ಮಾಡಬೇಕಾಗಿದೆ. ಇದಕ್ಕಾಗಿಅವರು ದೇಶಾಭಿಮಾನದ ಧ್ವಜಾರೋಹಣ ಅಭಿಯಾನ  ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕೆಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಕೋರಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *