ದಾವಣಗೆರೆ: ದಾವಣಗೆರೆ ನಗರದ ಕುವೆಂಪು ಕನ್ನಡ ಭವನದಲ್ಲಿ ರಾಷ್ಟ್ರಧ್ವಜವನ್ನು 22 ರೂಪಾಯಿ ನೀಡಿ ಪಡೆಯಬಹುದು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಬಿ. ವಾಮದೇವಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಗಸ್ಟ್ 13, 14 ಮತ್ತು 15 ನೇ ರಂದು ಭಾರತ ದೇಶ ಸ್ವತಂತ್ರ ಪಡೆದು 75 ವರ್ಷಗಳು ತುಂಬುತ್ತಿರುವ ಈ ಶುಭ ಸಂದರ್ಭದಲ್ಲಿ ದೇಶದ ಅಮೃತ ಮಹೋತ್ಸವದ ಸಂಕೇತವಾಗಿ ಆ: 13 ರ ಬೆಳಿಗ್ಗೆ 6:00 ಗಂಟೆ ಯಿಂದ ಆ 15 ರ ಸಂಜೆ 6:00 ಗಂಟೆ ವರೆಗೆ ನಿರಂತರವಾಗಿ ರಾಷ್ಟ್ರಧ್ವಜ ಹಾರಿಸುವಂತಹ ಅವಕಾಶವನ್ನು ಪ್ರತಿಯೊಬ್ಬರಿಗೂ ರಾಷ್ಟ್ರ ಮತ್ತು ರಾಜ್ಯ ಸರ್ಕಾರಗಳು ಕಲ್ಪಿಸಿಕೊಟ್ಟವೆ. ಇದು ದೇಶಾಭಿಮಾನದ ಪ್ರಶ್ನೆ ಅಷ್ಟೇ ಅಲ್ಲ, ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ – ಬಲಿದಾನ ಮಾಡಿದವರನ್ನು ಸ್ಮರಿಸುವಂತಹ ಕೆಲಸವನ್ನು ಪ್ರತಿಯೊಬ್ಬ ಭಾರತೀಯನು ಮಾಡಬೇಕಾಗಿದೆ. ಇದಕ್ಕಾಗಿಅವರು ದೇಶಾಭಿಮಾನದ ಧ್ವಜಾರೋಹಣ ಅಭಿಯಾನ ಕಾರ್ಯಕ್ರಮದಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಬೇಕೆಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರು ಕೋರಿದ್ದಾರೆ.



