Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ; ಬಿಜೆಪಿ ರೈತ ಮೋರ್ಚಾದಿಂದ ಟ್ರ್ಯಾಕ್ಟರ್ ಜಾಥಾ

ದಾವಣಗೆರೆ

ದಾವಣಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ; ಬಿಜೆಪಿ ರೈತ ಮೋರ್ಚಾದಿಂದ ಟ್ರ್ಯಾಕ್ಟರ್ ಜಾಥಾ

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಟ್ರ್ಯಾಕ್ಟರ್ ಜಾಥಾ ಹಮ್ಮಿಕೊಳ್ಳಲಾಯಿತು.

ವಿದ್ಯಾನಗರ ಸರ್ಕಲ್‌ನಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾ ಡೆಂಟಲ್ ಕಾಲೇಜು, ಗುಂಡಿ ಛತ್ರ ತಲುಪಿ, ವಿದ್ಯಾರ್ಥಿಭವನದ ಸರ್ಕಲ್ ಮೂಲಕ ಅಂಬೇಡ್ಕರ್ ವೃತ್ತದ ಮೂಲಕ ಜಯದೇವ ವೃತ್ತದ ವರೆಗೆ ನಡೆಯಿತು. 100ಕ್ಕೂ ಟ್ರ್ಯಾಕ್ಟರ್‌ಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಪ್ರದರ್ಶಿಸಲಾಯಿತು.

ಶಾಸಕ ಎಸ್‌.ಎ. ರವೀಂದ್ರನಾಥ್ , ಪಕ್ಷದ ಜಿಲ್ಲಾ ಉಸ್ತುವಾರಿ ಶಿವಲಿಂಗಪ್ಪ , ರೈತ ಉಸ್ತುವಾರಿ ಫಾಲಾಕ್ಷಗೌಡ ಪಟೇಲ್, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಮೇಯರ್ ಜಯಮ್ಮ ಗೋಪಿನಾಯ್ಕ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಲೋಕಿಕೆರೆ ನಾಗರಾಜ್, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯೆ ಗೀತಾ ದಿಳ್ಯೆಪ್ಪ, ಮಾಜಿ ಮೇಯರ್‌ಗಳಾದ ಎಸ್‌.ಟಿ.ವೀರೇಶ್, ಬಿ.ಜಿ. ಅಜಯ್‌ಕುಮಾರ್, ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ ಎ.ಎಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ಬಸವರಾಜನಾಯ್ಕ ಪಾಲ್ಗೊಂಡಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top