Connect with us

Dvgsuddi Kannada | online news portal | Kannada news online

ದಾವಣಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ; ಬಿಜೆಪಿ ರೈತ ಮೋರ್ಚಾದಿಂದ ಟ್ರ್ಯಾಕ್ಟರ್ ಜಾಥಾ

IMG 20220814 195026

ದಾವಣಗೆರೆ

ದಾವಣಗೆರೆ: ಸ್ವಾತಂತ್ರ್ಯ ಅಮೃತ ಮಹೋತ್ಸವ; ಬಿಜೆಪಿ ರೈತ ಮೋರ್ಚಾದಿಂದ ಟ್ರ್ಯಾಕ್ಟರ್ ಜಾಥಾ

ದಾವಣಗೆರೆ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆ ಬಿಜೆಪಿ ರೈತ ಮೋರ್ಚಾದಿಂದ ಬೃಹತ್ ಟ್ರ್ಯಾಕ್ಟರ್ ಜಾಥಾ ಹಮ್ಮಿಕೊಳ್ಳಲಾಯಿತು.

ವಿದ್ಯಾನಗರ ಸರ್ಕಲ್‌ನಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ ಜಾಥಾಕ್ಕೆ ಚಾಲನೆ ನೀಡಿದರು. ಜಾಥಾ ಡೆಂಟಲ್ ಕಾಲೇಜು, ಗುಂಡಿ ಛತ್ರ ತಲುಪಿ, ವಿದ್ಯಾರ್ಥಿಭವನದ ಸರ್ಕಲ್ ಮೂಲಕ ಅಂಬೇಡ್ಕರ್ ವೃತ್ತದ ಮೂಲಕ ಜಯದೇವ ವೃತ್ತದ ವರೆಗೆ ನಡೆಯಿತು. 100ಕ್ಕೂ ಟ್ರ್ಯಾಕ್ಟರ್‌ಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರ ಪ್ರದರ್ಶಿಸಲಾಯಿತು.

ಶಾಸಕ ಎಸ್‌.ಎ. ರವೀಂದ್ರನಾಥ್ , ಪಕ್ಷದ ಜಿಲ್ಲಾ ಉಸ್ತುವಾರಿ ಶಿವಲಿಂಗಪ್ಪ , ರೈತ ಉಸ್ತುವಾರಿ ಫಾಲಾಕ್ಷಗೌಡ ಪಟೇಲ್, ಮಾಯಕೊಂಡ ಶಾಸಕ ಪ್ರೊ. ಲಿಂಗಣ್ಣ, ಮೇಯರ್ ಜಯಮ್ಮ ಗೋಪಿನಾಯ್ಕ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಲೋಕಿಕೆರೆ ನಾಗರಾಜ್, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ್, ಮಾಜಿ ಅಧ್ಯಕ್ಷ ಯಶವಂತರಾವ್ ಜಾಧವ್, ರಾಜನಹಳ್ಳಿ ಶಿವಕುಮಾರ್, ಪಾಲಿಕೆ ಸದಸ್ಯೆ ಗೀತಾ ದಿಳ್ಯೆಪ್ಪ, ಮಾಜಿ ಮೇಯರ್‌ಗಳಾದ ಎಸ್‌.ಟಿ.ವೀರೇಶ್, ಬಿ.ಜಿ. ಅಜಯ್‌ಕುಮಾರ್, ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ ಎ.ಎಚ್. ಶಿವಯೋಗಿಸ್ವಾಮಿ, ಮಾಜಿ ಶಾಸಕ ಬಸವರಾಜನಾಯ್ಕ ಪಾಲ್ಗೊಂಡಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top