Connect with us

Dvgsuddi Kannada | online news portal | Kannada news online

ದಾವಣಗೆರೆ: ಜಪ್ತಿ ಮಾಡಿದ ಪಡಿತರ ಅಕ್ಕಿ ಬಹಿರಂಗ ಹರಾಜು

ದಾವಣಗೆರೆ

ದಾವಣಗೆರೆ: ಜಪ್ತಿ ಮಾಡಿದ ಪಡಿತರ ಅಕ್ಕಿ ಬಹಿರಂಗ ಹರಾಜು

ದಾವಣಗೆರೆ: ದಾವಣಗೆರೆ ಗ್ರಾಮಾಂತರ ಪ್ರದೇಶದ ಜವಳಘಟ್ಟ ಕ್ರಾಸ್ ಬಳಿ ಪೊಲೀಸ್ ಉಪ ನಿರೀಕ್ಷಕರರು ಹಾಗೂ ಆಹಾರ ಇಲಾಖೆ ಆಗಸ್ಟ್ 4 ರಂದು ಜಪ್ತಿ ಮಾಡಲಾದ 8.75 ಕೆ.ಜಿ ಕ್ವಿಂಟಾಲ್ ಪಡಿತರ ಅಕ್ಕಿಯನ್ನು ಹರಾಜು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆ.28 ರಂದು ಬೆಳಿಗ್ಗೆ 10.30 ಗಂಟೆಗೆ ಟಿ.ಎ.ಪಿ.ಸಿ.ಎಂ.ಎಸ್ (ಲಿ.) ಗ್ರಾಮಾಂತರ ಸಗಟು ಮಳಿಗೆ, ಎ.ಪಿ.ಎಂ.ಸಿ ಯಾರ್ಡ್, ಡಿ-ಬ್ಲಾಕ್, ಎ.ಆರ್ ಸಿ ಗೋದಾಮು, ಎ.ಪಿ.ಎಂ.ಸಿ. ಕಚೇರಿ ಹಿಂಬಾಗ ದಾವಣಗೆರೆ ಇಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎ.ಪಿ.ಎಂ.ಸಿ ಟ್ರೇಡ್ ಲೈಸೆನ್ಸ್ ನೊಂದಿಗೆ ಹಾಜರಾಗುವುದು ಕಡ್ಡಾಯ ಎಂದು ದಾವಣಗೆರೆ ತಹಶೀಲ್ದಾರ್ ಬಸನಗೌಡ ಕೋಟೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top