Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಲಕ್ಷ್ಮೀಗೆ ಅಭಿನಂದನೆ

FB IMG 1661349471002

ದಾವಣಗೆರೆ

ದಾವಣಗೆರೆ: ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಲಕ್ಷ್ಮೀಗೆ ಅಭಿನಂದನೆ

ದಾವಣಗೆರೆ: ಕೌಶಲ್ಯ ಸ್ಫೂರ್ತಿಯಡಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ಹರಿಹರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಲಕ್ಮ್ಮೀ ಎಂ.ಪಿಗೆ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ ಕಾರ್ಯಕ್ರಮದಲ್ಲಿ ಅಭಿನಂದನೆ ಸಲ್ಲಿಸಲಾಯಿತು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಕೌಶಲ್ಯ ಮಿಷನ್ ದಾವಣಗೆರೆ ಇವರರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಯುವ ಕೌಶಲ್ಯ ದಿನಾಚರಣೆಯ ಪ್ರಯುಕ್ತವಾಗಿ ಪ್ರಬಂಧ ಸ್ಪರ್ಧೆಯನ್ನು ಪದವಿ ಪೂರ್ವ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು.

ಸ್ಪರ್ಧೆಗೆ ಜಿಲ್ಲೆಯಿಂದ ಒಟ್ಟು 24 ವಿದ್ಯಾರ್ಥಿಗಳು ಭಾಗವಹಿಸಿದ್ದು, ಹರಿಹರ ತಾಲ್ಲೂಕಿನ ಪ್ರಥಮ ವರ್ಷದ ಬಿ.ಎಸ್ಸಿ. ವಿದ್ಯಾರ್ಥಿನಿ ಲಕ್ಷ್ಮಿ.ಎಂ.ಪಿ. ವಿಜೇತರಾಗಿದ್ದು, ವಿಜೇತರಾಗಿರುವ ವಿದ್ಯಾರ್ಥಿನಿಯು ಕೌಶಲ್ಯ ಸ್ಪೂರ್ತಿ ಅಡಿಯಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಒಂದು ದಿನ. (District Collector Shadowing) ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಮಾಡಿಕೊಡಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top