Connect with us

Dvgsuddi Kannada | online news portal | Kannada news online

ದಾವಣಗೆರೆ: ತಂಬಾಕು ಉತ್ಪನ್ನ ಮಾರಾಟ ನಿಯಮ ಉಲ್ಲಂಘನೆ; 24 ಪ್ರಕರಣ ದಾಖಲು

ದಾವಣಗೆರೆ

ದಾವಣಗೆರೆ: ತಂಬಾಕು ಉತ್ಪನ್ನ ಮಾರಾಟ ನಿಯಮ ಉಲ್ಲಂಘನೆ; 24 ಪ್ರಕರಣ ದಾಖಲು

ದಾವಣಗೆರೆ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಜಗಳೂರು ತಾಲ್ಲೂಕು ತನಿಖಾ ತಂಡದೊಂದಿಗೆ ಬಿಳಿಚೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ತಂಡ ರಚಿಸಿಕೊಂಡು ತಂಬಾಕು ಉತ್ಪನ್ನ ಮಾರಾಟ ನಿಯಮ ಉಲ್ಲಂಘನೆ ಮೇಲೆ ದಾಳಿ ಮಾಡಲಾಗಿದೆ.

ಸಿಗರೇಟು ಮತ್ತು ಇತರೆ ತಂಬಾಕು ಉತ್ಪನ್ನಗಳ ಅಧಿನಿಯಮ-2003 ರ ಅಡಿಯಲ್ಲಿ ಒಟ್ಟು 24 ಪ್ರಕರಣ ದಾಖಲಿಸಿ ರೂ.2100 ದಂಡ ವಿಧಿಸಲಾಗಿದೆ. ದಾಳಿಯ ವೇಳೆ ತಂಡವು ಕರ್ನಾಟಕದಲ್ಲಿ ಪ್ರತಿದಿನ ಸರಾಸರಿ 293 ಮಕ್ಕಳು ತಂಬಾಕು ಸೇವನೆಗೆ ಒಳಗಾಗುತ್ತಿದ್ದಾರೆ. ಆದ್ದರಿಂದ 18 ವರ್ಷದೊಳಗಿನ ಯುವಕ-ಯುವತಿಯರಿಗೆ ತಂಬಾಕು ಉತ್ಪನ್ನಗಳು ಮಾರಾಟ ಮಾಡಬಾರದು ಹಾಗೂ ಶೈಕ್ಷಣಿಕ ಸಂಸ್ಥೆಯ 100 ಗಜದ ಒಳಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು.

ದಾಳಿಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಮೇಲ್ವಿಚಾರಣ ಅಧಿಕಾರಿ ಎಂ.ವಿ ಹೊರಕೇರಿ, ಜಿಲ್ಲಾ ಸಲಹೆಗಾರ ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತ ದೇವರಾಜ್ ಕೆ.ಪಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪರುಶುರಾಮ್, ಸಮೂದಾಯ ಆರೋಗ್ಯ ಅಧಿಕಾರಿ ಅಶ್ವಿನಿ.ಸಿ ಮತ್ತು ರವಿ, ಬಿಳಿಚೋಡು ಪೋಲೀಸ್ ಠಾಣೆಯ ಸಿಬ್ಬಂದಿ ಉಮಾಶಂಕರ್ ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top