Connect with us

Dvgsuddi Kannada | online news portal | Kannada news online

ದಾವಣಗೆರೆ: ಸರ್ಕಾರ ವಿವಿಧ ಗ್ರಾಮದಲ್ಲಿ ಫಲಾನುಭವಿಗಳಿಗೆ ಭೂಮಿ ಮಂಜೂರು; ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ

ದಾವಣಗೆರೆ: ಸರ್ಕಾರ ವಿವಿಧ ಗ್ರಾಮದಲ್ಲಿ ಫಲಾನುಭವಿಗಳಿಗೆ ಭೂಮಿ ಮಂಜೂರು; ಆಕ್ಷೇಪಣೆ ಸಲ್ಲಿಸಲು ಅವಕಾಶ

ದಾವಣಗೆರೆ: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಫಲಾನುಭವಿಗಳಿಗೆ ಭೂಮಿ ಮಂಜೂರು ಮಾಡಲಾಗಿದ್ದು ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಭೂ ಒಡೆತನ ಯೋಜನೆಯಡಿ ದಾವಣಗೆರೆ ತಾಲ್ಲೂಕಿನ ಗುಡಾಳು ಗ್ರಾಮದ ಸರ್ವೆ ನಂ.217/2ರಲ್ಲಿ 2.00 ಎಕರೆ ಜಮೀನು. ಗುಮ್ಮನೂರು ಗ್ರಾಮದ ಸರ್ವೆ ನಂ.92/1 ರಲ್ಲಿ 6.00 ಎಕರೆ ಜಮೀನು. ಚನ್ನಗಿರಿ ತಾಲ್ಲೂಕಿನ ಹೊದಿಗೆರೆ ಗ್ರಾಮದ ಸರ್ವೆ ನಂ.30/1ರಲ್ಲಿ 2.00 ಎಕರೆ ಜಮೀನು ಹಾಗೂ ಜಗಳೂರು ತಾಲ್ಲೂಕಿನ ಬಿಸ್ತುವಳ್ಳಿ ಗ್ರಾಮದ ಸರ್ವೆ.17/1ರಲ್ಲಿ 2.00 ಎಕರೆ ಜಮೀನನ್ನು ಗುರುತಿಸಿ, ಜಮೀನುಗಳನ್ನು ಖರೀದಿಸಲು ಪ್ರಸ್ತಾವನೆ ಸ್ವೀಕರಿಸಲಾಗಿದೆ.

ಜಮೀನುಗಳಿಗೆ ಸಂಬಂಧಿಸಿದ ಏನಾದರೂ ಆಕ್ಷೇಪಣೆಗಳಿದ್ದಲ್ಲಿ ಪ್ರಕಟವಾದ 07 ದಿನಗಳ ಒಳಗಾಗಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕುರುಬರ ಹಾಸ್ಟೆಲ್, ಹದಡಿ ರಸ್ತೆ ದಾವಣಗೆರೆ ಇವರಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08192 233309 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top