ದಾವಣಗೆರೆ: ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ; ಜಿಲ್ಲಾಧ್ಯಕ್ಷರ ವಿರುದ್ಧ ವೈ.ರಾಮಪ್ಪ ಕಿಡಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕಾಂಗ್ರೆಸ್​ ಪಕ್ಷದಿಂದ ಉಚ್ಚಾಟನೆಯಾಗಿರುವ ಡಾ.ವೈ.ರಾಮಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಕೈ ನಾಯಕರು, ನನ್ನನ್ನು ರಾಜಕೀಯವಾಗಿ ತುಳಿಯಲು ಪ್ರಯತ್ನಿಸಿದ್ದಾರೆ. ನನ್ನ ವಿರುದ್ಧ ಕೆಪಿಸಿಸಿಗೆ ಪಿತೂರಿ ಮಾಡಲಾಗಿದ್ದು, ಕೆಪಿಸಿಸಿ ಶಿಸ್ತು ಸಮಿತಿಗೆ ದೂರು ನೀಡಿದ್ದಾರೆ. ನನ್ನ ವಿರುದ್ಧ ಕ್ರಮ ಕೈಗೊಂಡವರು ನಾಲಾಯಕ ಜಿಲ್ಲಾಧ್ಯಕ್ಷ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಮಲ್ಲಿಕಾರ್ಜುನ್ ಅಂಥವರು 50 ಜನರು ಬಂದರು ನನ್ನನ್ನ ಏನು ಮಾಡಲು ಸಾಧ್ಯವಿಲ್ಲ, ಮಲ್ಲಿಕಾರ್ಜುನ ಕೆಲವರ ಮಾತು ಕೇಳಿ ಈ ಕ್ರಮ ಮಾಡಿದ್ದಾರೆ. ಮಲ್ಲಿಕಾರ್ಜುನ ಅವರಿಗೆ ಶ್ರೀಮಂತಿಕೆ ಇದ್ದರೆ ಅವರ ಮನೆಯಲ್ಲಿ ಇಟ್ಟುಕೊಳ್ಳಲಿ. ಮಲ್ಲಿಕಾರ್ಜುನ ಬಿಜೆಪಿಗೆ ಬೆಂಬಲ ನೀಡುವವರೋ, ಪಕ್ಷವನ್ನ ಬೆಳೆಸುವವರೋ ಸ್ಪಷ್ಟಪಡಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಗ್ಗೆ ನಾನು ಸೋನಿಯಾ ಗಾಂಧಿಯವರಿಗೆ ದೂರು ನೀಡುತ್ತೇನೆ.‌ ನನ್ನ ಪತ್ರಕ್ಕೆ ಜಿಲ್ಲಾಧ್ಯಕ್ಷ ಮಂಜಪ್ಪ ಉತ್ತರ ನೀಡದಿದ್ದರೆ ಅವರ ವಿರುದ್ದ ಕ್ರಿಮಿನಲ್ ಕೇಸ್ ಹಾಕುತ್ತೇನೆ ಎಚ್ಚರಿಕೆ ನೀಡಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *