ದಾವಣಗೆರೆ: ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆಯಾಗಿರುವ ಡಾ.ವೈ.ರಾಮಪ್ಪ, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಜಿಲ್ಲಾಧ್ಯಕ್ಷ ಎಚ್.ಬಿ.ಮಂಜಪ್ಪ ವಿರುದ್ಧ ಕಿಡಿಕಾರಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲಾ ಕೈ ನಾಯಕರು, ನನ್ನನ್ನು ರಾಜಕೀಯವಾಗಿ ತುಳಿಯಲು ಪ್ರಯತ್ನಿಸಿದ್ದಾರೆ. ನನ್ನ ವಿರುದ್ಧ ಕೆಪಿಸಿಸಿಗೆ ಪಿತೂರಿ ಮಾಡಲಾಗಿದ್ದು, ಕೆಪಿಸಿಸಿ ಶಿಸ್ತು ಸಮಿತಿಗೆ ದೂರು ನೀಡಿದ್ದಾರೆ. ನನ್ನ ವಿರುದ್ಧ ಕ್ರಮ ಕೈಗೊಂಡವರು ನಾಲಾಯಕ ಜಿಲ್ಲಾಧ್ಯಕ್ಷ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾಜಿ ಸಚಿವ ಮಲ್ಲಿಕಾರ್ಜುನ್ ಅಂಥವರು 50 ಜನರು ಬಂದರು ನನ್ನನ್ನ ಏನು ಮಾಡಲು ಸಾಧ್ಯವಿಲ್ಲ, ಮಲ್ಲಿಕಾರ್ಜುನ ಕೆಲವರ ಮಾತು ಕೇಳಿ ಈ ಕ್ರಮ ಮಾಡಿದ್ದಾರೆ. ಮಲ್ಲಿಕಾರ್ಜುನ ಅವರಿಗೆ ಶ್ರೀಮಂತಿಕೆ ಇದ್ದರೆ ಅವರ ಮನೆಯಲ್ಲಿ ಇಟ್ಟುಕೊಳ್ಳಲಿ. ಮಲ್ಲಿಕಾರ್ಜುನ ಬಿಜೆಪಿಗೆ ಬೆಂಬಲ ನೀಡುವವರೋ, ಪಕ್ಷವನ್ನ ಬೆಳೆಸುವವರೋ ಸ್ಪಷ್ಟಪಡಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಬಗ್ಗೆ ನಾನು ಸೋನಿಯಾ ಗಾಂಧಿಯವರಿಗೆ ದೂರು ನೀಡುತ್ತೇನೆ. ನನ್ನ ಪತ್ರಕ್ಕೆ ಜಿಲ್ಲಾಧ್ಯಕ್ಷ ಮಂಜಪ್ಪ ಉತ್ತರ ನೀಡದಿದ್ದರೆ ಅವರ ವಿರುದ್ದ ಕ್ರಿಮಿನಲ್ ಕೇಸ್ ಹಾಕುತ್ತೇನೆ ಎಚ್ಚರಿಕೆ ನೀಡಿದರು.



