Connect with us

Dvgsuddi Kannada | online news portal | Kannada news online

ದಾವಣಗೆರೆ: ಕಂದನಕೋವಿ ಗ್ರಾಮದಲ್ಲಿ ಚಿರತೆ ಪತ್ತೆ

ದಾವಣಗೆರೆ

ದಾವಣಗೆರೆ: ಕಂದನಕೋವಿ ಗ್ರಾಮದಲ್ಲಿ ಚಿರತೆ ಪತ್ತೆ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ಕಂದನಕೋವಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಪತ್ತೆಯಾಗಿದ್ದು, ಗ್ರಾಮಸ್ಥರು ಭಯಗೊಂಡಿದ್ದಾರೆ. ಸಾರ್ವಜನಿಕರ ಓಡಾಟಕ್ಕೆ ತೊಂದರೆ ಉಂಟಾಗಿದ್ದು, ಈ ಬಗ್ಗೆ ಸ್ಥಳ ಪರಿಶೀಲನೆ ನಡೆಸಬೇಕು ಎಂದು ಕಂದನಕೋವಿ ಗ್ರಾಮ ಪಂಚಾಯತಿ ಕಾರ್ಯಾಲಯ ಅರಣ್ಯ ಇಲಾಖೆಗೆ ಕೋರಿದೆ.

ಸೆ.21 ರಂದು ಕಂದನಕೋವಿ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಪಾವಡರಂಗವ್ವನಹಳ್ಳಿ ರಸ್ತೆಯ ಆಲದ ಮರ‌ ಬಳಿ ಹಾಗೂ ರಾತ್ರಿ 8 ಗಂಟೆಗೆ ರುದ್ರನಕಟ್ಟೆ ಗ್ರಾಮದ ಸರ್ವೆ ನಂ. 28 ರಲ್ಲಿನ ಲೋಕೇಶ್ ಎಂಬುವರ ಜಮೀನಲ್ಲಿ ಚಿರತೆ ಕಂಡು ಬಂದಿದೆ. ಈ ಬಗ್ಗೆ ದಾವಣಗೆರೆ ಅರಣ್ಯ ‌ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲಿಸಬೇಕು ಎಂದು ಕಂದನಕೋವಿ ಗ್ರಾಮ ಪಂಚಾತಿ ಕಾರ್ಯಾಲಯ ಪತ್ರ ಬರೆದಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top