ದಾವಣಗೆರೆ: 2022-23ನೇ ಸಾಲಿಗೆ ದಾವಣಗೆರೆ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 12 ಮೆಟ್ರಿಕ್ ನಂತರ ಮತ್ತು 6 ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಯರಿಗೆ ಸ್ವಯಂ, ರಕ್ಷಣಾ ಕೌಶ್ಯಲ್ಪಗಳ ತರಬೇತಿ ನೀಡುವ “ಓಬವ್ವ ಆತ್ಮ ರಕ್ಷಣಾ ಕಲೆ” ಯೋಜನೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ಮಾನ್ಯತೆ ಪಡೆದಿರುವ ಅರ್ಹ ತರಬೇತಿ ಸಂಸ್ಥೆಗಳಿಂದ ಮಹಿಳಾ ಕರಾಟೆ ತರಬೇತಿದಾರರನ್ನು ಒದಗಿಸಲು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಅಕ್ಟೋಬರ್ 6 ರ ಸಂಜೆ 5.30 ರೊಳಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಛೇರಿ, ಜಿಲ್ಲಾಡಳಿತ ಭವನದಲ್ಲಿ ಇಲ್ಲಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 08192-262073 ಗೆ ಸಂರ್ಪಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



