ಮುರಿದು ಬಿದ್ದ ಭದ್ರಾ ನಾಲೆ ತೊಟ್ಟಿಲು; ಕೂಡಲೇ ಸರಿ ಪಡಿಸದಿದ್ರೆ ದಾವಣಗೆರೆ ಭಾಗದ ಭತ್ತ ಬೆಳೆಗಾರರಿಗೆ ಸಂಕಷ್ಟ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಭಾರೀ ಮಳೆಗೆ ಭದ್ರಾ ಜಲಾಶಯದಿಂದ ದಾವಣಗೆರೆಗೆ ಭಾಗದ ರೈತರ ಜಮೀನುಗಳಿಗೆ ನೀರು ಪೂರೈಸುವ ನಾಲೆಯ  ತೊಟ್ಟಿಲು ನಲ್ಕುಂದ ಗ್ರಾಮದಲ್ಲಿ ಮುರಿದು ಬಿದ್ದಿದೆ. ಇದರಿಂದ ಅಪಾರ ಪ್ರಮಾಣ ನೀರು ನಲ್ಕುಂದ-ಶ್ಯಾಗಲೆ ಹಳ್ಳಕ್ಕೆ ಹರಿದು ಹೋಗುತ್ತಿದೆ. ಈ ತೊಟ್ಟಿಲು ಕೂಡಲೇ ಸರಿಪಡಿಸದಿದ್ರೆ ದಾವಣಗೆರೆ ಭಾಗದ ಭತ್ತ ಬೆಳೆಗಾರರಿಗೆ ಸಮಯಕ್ಕೆ ಸರಿಯಾಗಿ ನೀರಿಲ್ಲದಂತಾಗುವ ಆತಂಕ ಉಂಟಾಗಿದೆ.

IMG 20221002 122512

ಬಾಡಾದಿಂದ ನಲ್ಕುಂದ ವರೆಗೆ 7 ಕಿಲೋಮೀಟರ್‌ ನಿರ್ಮಿಸಿರುವ ಈ ತೊಟ್ಟಿಲು ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಕುಸಿದು ಬಿದ್ದಿದೆ. ಇದರಿಂದ ಅಪಾರ ಪ್ರಮಾಣದ ನೀರು ಸೋರಿಕೆ ಆಗುತ್ತಿದೆ. ಈ ನೀರು ಹಳ್ಳಕ್ಕೆ ಹರಿಯುತ್ತಿದ್ದು, ಹಳ್ಳ ಉಕ್ಕಿ ಹರಿಯುತ್ತಿರುವುದರಿಂದ ಶ್ಯಾಗಲೆ ಸಂಪರ್ಕ ಕಡಿತಗೊಂಡಿದೆ. ಈ ಕಾಲುವೆಯಿಂದ ದಾವವಣಗೆರೆ ಭಾಗಕ್ಕೆ ಪೂರೈಕೆ ಆಗುವ ನೀರಿನಲ್ಲಿ ವ್ಯತ್ಯ ಉಂಟಾಗಿದ್ದು, ಮುರಿದು ಬಿದ್ದ ತೊಟ್ಟಿಲು ಕೂಡಲೇ ಸರಿಪಡಿಸದಿದ್ದರೆ ಈ ಬಾರಿಯ ಭತ್ತದ ಬೆಳೆಗೆ ಸಮಯಕ್ಕೆ ಸರಿಯಾಗಿ ನೀರು ಪೂರೈಕೆ ಆಗದಿರುವ ಸಂಕಷ್ಟ ರೈತರಲ್ಲಿ ಮೂಡಿದೆ. ನಾಳೆ ಕಾಡಾ ಅಧ್ಯಕ್ಷೆ ಪವಿತ್ರಾ ರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಲಿದ್ದು, ತಕ್ಷಣ ಏನು ಕ್ರಮ ಕೈಗೊಳ್ಳುತ್ತಾರೋ ಕಾಯ್ದು ನೋಡಬೇಕಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *