ದಾವಣಗೆರೆ: ನಗರ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯ ನಡೆಸಲು ಕನಿಷ್ಠ 3000 ಚದರ ಅಡಿ ವಿಸ್ತೀರ್ಣವುಳ್ಳ ಸುಸಜ್ಜಿತವಾದ ಬಾಡಿಗೆ ಕಟ್ಟಡ ಅವಶ್ಯಕತೆ ಇದ್ದು, ಮೂಲಭೂತ ಸೌಲಭ್ಯವಿರುವ ಕಟ್ಟಡದ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಅ.10 ರೊಳಗೆ ಅಂಚೆ ಮೂಲಕ ಖುದ್ದಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ನಗರದ ದೇವರಾಜ ಅರಸು ಭವನದ ಜಿ.ಮಲ್ಲಿಕಾರ್ಜುನಪ್ಪ ದ್ವಿಪಥ ರಸ್ತೆ, (ಹೊಸ ರಿಂಗ್ ರಸ್ತೆ) ರತ್ನಮ್ಮ ತೆಲಗಿ ಸಿದ್ದೇಶಿ ರೆಸಿಡೆನ್ಸಿಯಲ್ ಲೇ ಔಟ್ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಕಲ್ಯಾಣಾಧಿಕಾರಿ ಸಂಪರ್ಕಿಸಬಹುದು ತಾ.ಕಲ್ಯಾಣಾಧಿಕಾರಿ ಗಾಯಿತ್ರಿ ತಿಳಿಸಿದ್ದಾರೆ.



