ದಾವಣಗೆರೆ: ಉಪ ಬಂಧಿಖಾನೆ ರಸ್ತೆ ಬಳಿ ಯುಜಿಡಿ ನೀರು; ಸಮಸ್ಯೆ ಪರಿಹರಿಸುವಂತೆ ಆಯುಕ್ತರಿಗೆ ಮನವಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ನಗರದ ವಸಂತ ರಸ್ತೆಯಲ್ಲಿರುವ ಉಪ ಬಂಧಿಖಾನೆ ಎದುರಿನಲ್ಲಿ ಯುಜಿಡಿ ನೀರು ರಸ್ತೆಗೆ ಹರಿದು ಬರುತ್ತಿದೆ. ಇಲ್ಲಿ‌ ನೀರು ನಿಂತಿರುವುದರಿಂದ ತುಂಬಾ ಸಮಸ್ಯೆಯಾಗಿದ್ದು, ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಗೌಡ ಟಿ ಪಾಟೀಲ್‌ ಪಾಲಿಕೆ ಆಯುಕ್ತ ವಿಶ್ವನಾಥ್ ಪಿ ಮುದ್ದಜ್ಜಿ ಅವರಿಗೆ ಮನವಿ ಸಲ್ಲಿಸಿದರು.

ಯುಜಿಡಿ ಕಾಮಗಾರಿಯಿಂದಾಗಿ ಈ ತೊಂದರೆ ಆಗಿದೆ. ಸರಿಯಾಗಿ ನೀರು ಹರಿದು ಹೋಗುತ್ತಿಲ್ಲ. ಈ ರಸ್ತೆಯ ಪಕ್ಕದಲ್ಲಿ ಪೊಲೀಸ್ ಠಾಣೆ ಸಹ ಇದೆ. ನಿತ್ಯವೂ ಇಲ್ಲಿಗೆ ನೂರಾರು ಜನರು ಬರುತ್ತಾರೆ. ಜನನಿಬಿಡ ಪ್ರದೇಶವೂ ಹೌದು. ವಾಹನಗಳ ಓಡಾಟವೂ ಜಾಸ್ತಿಯಿರುತ್ತದೆ. ಇದರಿಂದಾಗಿ ಸಮಸ್ಯೆ ತುಂಬಾ ತೀವ್ರವಾಗಿದ್ದು, ಆದಷ್ಟು ಬೇಗ ನೀರು ಹರಿದು ಹೋಗುವ ವ್ಯವಸ್ಥೆ ಮಾಡುವಂತೆ ಮನವಿಯಲ್ಲಿ ಆಗ್ರಹಿಸಿದ್ದಾರೆ.

ಯುಜಿಡಿ ನೀರು ಮ್ಯಾನ್ ಹೋಲ್‌ನಿಂದ ರಸ್ತೆಯ ಮೇಲ್ಭಾಗಕ್ಕೆ ಬರುತ್ತಿದೆ. ಇದೇ ರಸ್ತೆಯಲ್ಲಿ ಜೈನ ಸಮುದಾಯದ ದೇಗುಲವಿದ್ದು, ದೇವಸ್ಥಾನಕ್ಕೆ ಬರುವ ಭಕ್ತಾದಿಗಳಿಗೆ ತುಂಬಾನೇ ತೊಂದರೆಯಾಗಿದೆ. ಕೆಟ್ಟ ವಾಸನೆ ಬರುತ್ತಿರುವುದರಿಂದ ಜನರು ಮೂಗು ಮುಚ್ಚಿಕೊಂಡು ಓಡಾಡುವ ಸ್ಥಿತಿ ನಿರ್ಮಾಣವಾಗಿದೆ. ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ‌ ತಂದಿದ್ದರೂ ಪ್ರಯೋಜನ ಆಗಿಲ್ಲ. ಆದ್ದರಿಂದ ಆದಷ್ಟು ಬೇಗ ಈ ಸಮಸ್ಯೆ ಪರಿಹರಿಸಿಕೊಡುವಂತೆ ಸ್ಥಳೀಯರ ಪರವಾಗಿ ಮಾನ್ಯ ಆಯುಕ್ತರನ್ನು ಆಗ್ರಹಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *