Connect with us

Dvgsuddi Kannada | online news portal | Kannada news online

ದಾವಣಗೆರೆ: ಕೊಚ್ಚಿ ಹೋದ ಭದ್ರಾ ನಾಲೆ ದುರಸ್ಥಿ; ನಾಲೆಗೆ ನೀರು ಹರಿಸುವುದು ಬಂದ್ ; ಸಹರಿಸುವಂತೆ ರೈತರಲ್ಲಿ ಮನವಿ

ದಾವಣಗೆರೆ

ದಾವಣಗೆರೆ: ಕೊಚ್ಚಿ ಹೋದ ಭದ್ರಾ ನಾಲೆ ದುರಸ್ಥಿ; ನಾಲೆಗೆ ನೀರು ಹರಿಸುವುದು ಬಂದ್ ; ಸಹರಿಸುವಂತೆ ರೈತರಲ್ಲಿ ಮನವಿ

ದಾವಣಗೆರೆ: ಭಾರೀ ಮಳೆಗೆ ಭದ್ರಾ ಬಲದಂಡೆ ನಾಲೆಯ ದಾವಣಗೆರೆ ಶಾಖಾ ಕಾಲುವೆ ತೊಟ್ಟಿಲು ನಲ್ಕುಂದ ಗ್ರಾಮದ ಬಳಿ ಕೊಚ್ಚಿ ಹೋಗಿದ್ದು, ತುರ್ತಾಗಿ ದುರಸ್ಥಿ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ಮುಂಗಾರು ಹಂಗಾಮಿನ ಬೆಳೆಗಳಿಗೆ ಬಲದಂಡೆ ನಾಲೆಯಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗಿದೆ. ತೊಟ್ಟಿಲು ದುರಸ್ಥಿ ಕಾರ್ಯ ಕೈಗೊಂಡು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕಾಗಿರುವುದರಿಂದ ಸಂಬಂಧಪಟ್ಟ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಸುಜಾತ.ಎನ್ ತಿಳಿಸಿದ್ದಾರೆ.

ಭದ್ರಾ ಜಲಾಶಯದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಭದ್ರಾ ಬಲದಂಡೆ ನಾಲೆಯ ದಾವಣಗೆರೆ ಶಾಖಾ ಕಾಲುವೆಗೆ ಮಳೆ ನೀರು ಸೇರಿಕೊಂಡ ಪರಿಣಾಮವಾಗಿ ಸರಪಳಿ 35.50 ಕಿ.ಮೀ.ನಲ್ಲಿ ಬರುವ ನಲ್ಕುಂದ ಗ್ರಾಮದ ಸಮೀಪ ಅಕ್ವಡಕ್ಟ್ ನ ಎಕ್ಸಿಟ್ ಟ್ರಾನ್ಸಿಷನ್ ಮಣ್ಣಿನ ಏರಿಯ ಮೇಲೆ ನೀರು ಹರಿದು ಅಕ್ವಡಕ್ಟ್‍ನ ರಕ್ಷಣಾ ತಡೆಗೋಡೆ ಕುಸಿದು ಸೇತುವೆ ಸಂಪೂರ್ಣ ಕೊಚ್ಚಿ ಹೋಗಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top