ದಾವಣಗೆರೆ: ಜಿಲ್ಲೆಯ ಅಣಬೇರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಲ್ಕುಂದ ಗ್ರಾಮದಲ್ಲಿ ಕೊಚ್ಚಿ ಹೋದ ಭದ್ರಾ ಜಲಾಶಯದ ಬಲದಂಡೆಯ ನಾಲೆಯ ತೊಟ್ಟಿಲು ಸೇತುವೆ ಕಾಮಗಾರಿ ಸ್ಥಳಕ್ಕೆ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷೆ ಪವಿತ್ರ ರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು.
ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ತಿಳಿಸಲಾಯಿತು. ಮುಂದಿನ ದಿನಗಳಲ್ಲಿ ಭದ್ರಾ ಡ್ಯಾಮ್ ನಿಂದ ಭದ್ರಾ ನಾಲೆಯ ಕೊನೆ ಭಾಗದ ಕಾಲುವೆಯವರೆಗೂ ಅಧಿಕಾರಿಗಳೊಂದಿಗೆ ಪ್ರವಾಸ ನಡೆಸಿ ತಾಂತ್ರಿಕ ಮಾಹಿತಿ ಪಡೆದು ಶಿಥಿಲಾವಸ್ಥೆಯಲ್ಲಿರುವ ಭಾಗಗಳನ್ನು ಸರಿಪಡಿಸಲು ಅಗತ್ಯವಾದ ಮಾಹಿತಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರು ಶ್ರೀ ವಾಗೀಶ್ ರವರು, ರೈತ ಮುಖಂಡರು, ಅಧಿಕಾರಿಗಳು ಮತ್ತು ಸ್ಥಳೀಯ ರೈತರು ಉಪಸ್ಥಿತರಿದ್ದರು.



