Connect with us

Dvgsuddi Kannada | online news portal | Kannada news online

ದಾವಣಗೆರೆ: ಆಧುನಿಕ ಹೈನುಗಾರಿಕೆ ಕುರಿತು 25 ರೈತರಿಗೆ ತರಬೇತಿ

ದಾವಣಗೆರೆ

ದಾವಣಗೆರೆ: ಆಧುನಿಕ ಹೈನುಗಾರಿಕೆ ಕುರಿತು 25 ರೈತರಿಗೆ ತರಬೇತಿ

ದಾವಣಗೆರೆ; ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ದಾವಣಗೆರೆ ಪಿ.ಬಿ. ರಸ್ತೆಯ ಅರುಣ ಚಿತ್ರ ಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ ಮಾಹೆಯಲ್ಲಿ ರೈತರಿಗೆ ಪಶುಸಂಗೋಪನಾ ಚಟುವಟಿಕೆ ಕುರಿತು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಅಕ್ಟೋಬರ್ 20 ಮತ್ತು 21 ರವರೆಗೆ ಆಧುನಿಕ ಹೈನುಗಾರಿಕೆ ಬಗ್ಗೆ 25 ಜನರಿಗೆ ತರಬೇತಿ ನೀಡುವ ಗುರಿ ಹೊಂದಲಾಗಿದೆ. ತರಬೇತಿಗೆ ಹಾಜರಾಗುವ ರೈತರು ಆಧಾರ್ ಕಾರ್ಡ್ ಜೆರಾಕ್ಸ್, ಎರಡು ಪಾಸ್‍ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರ ತರಬೇಕು, ತರಬೇತಿ ಅವಧಿಯಲ್ಲಿ ಯಾವುದೇ ಪೆÇ್ರೀತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುವೈದ್ಯಕೀಯ ಸಹಾಯಕರ ತರಬೇತಿ ಕೇಂದ್ರ ದಾವಣಗೆರೆ ಇವರ ದೂರವಾಣಿ ಸಂಖ್ಯೆ 08192-233787 ಗೆ ಸಂಪರ್ಕಿಸಬಹುದು ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿಗಳು (ಆಡಳಿತ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top