ದಾವಣಗೆರೆ: ಜಿಲ್ಲೆಯ ಪೂಜಾರಿಯೊಬ್ಬ ಆಂಜನೇಯನ ಮೂರ್ತಿ ಮೇಲೆ ಕಾಲಿಟ್ಟು ಅಭಿಷೇಕ ಮಾಡಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಭಕ್ತರು ಆಕ್ರೋಶ ವ್ಯಕ್ತವಾಗಿತ್ತು.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಕತ್ತಿಗೆ ಗ್ರಾಮದ ನಿವಾಸಿ ಮಹೇಶ್ವರಯ್ಯ ಸ್ವಾಮಿ, ಕಳೆದ ಕೆಲ ದಿನಗಳ ಹಿಂದೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬಳ್ಳೂರ ಗ್ರಾಮದ ಆಂಜನೇಯ ಸ್ವಾಮೀ ದೇವಸ್ಥಾನದಲ್ಲಿ ದೇವರ ಮೂರ್ತಿ ಮೇಲೆ ಕಾಲಿಟ್ಟು ಪೂಜೆ ಮಾಡಿದ್ದ. ದೇವರ ಮೇಲೆ ಕಾಲಿಟ್ಟು ಅಭಿಷೇಕ ಮಾಡುವ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ಫುಲ್ ವೈರಲ್ ಆಗಿತ್ತು. ಬಳಿಕ ಸಾರ್ವ ಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಅರ್ಚಕ ಎಚ್ಚೆತ್ತುಕೊಂಡು ಕ್ಷಮೆಯಾಚಿಸಿದ್ದಾನೆ.



