Connect with us

Dvgsuddi Kannada | online news portal | Kannada news online

ದಾವಣಗೆರೆ: ಪುನೀತ್ ಆದರ್ಶ ಮೈಗೂಡಿಸಿಕೊಳ್ಳುವಂತೆ ಶಾಮನೂರು ಶಿವಶಂಕರಪ್ಪ ಕರೆ

IMG 20221029 WA0008

ದಾವಣಗೆರೆ

ದಾವಣಗೆರೆ: ಪುನೀತ್ ಆದರ್ಶ ಮೈಗೂಡಿಸಿಕೊಳ್ಳುವಂತೆ ಶಾಮನೂರು ಶಿವಶಂಕರಪ್ಪ ಕರೆ

ದಾವಣಗೆರೆ: ನಗರದ ಮಾಜಿ ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ ನಟ ದಿ.ಪುನೀತ್ ರಾಜಕುಮಾರ್ ಅವರ ಪ್ರಥಮ ವರ್ಷದ ಪುಣ್ಯ ಸ್ಮರಣೆಯನ್ನು ಆಚರಿಸಲಾಯಿತು.

ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಪುನೀತ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ ಮಾತನಾಡಿ, ಪುನೀತ್ ರಾಜಕುಮಾರ್ ಅವರು ಒಬ್ಬ ಅತ್ಯುತ್ತಮ ಕಲಾವಿದರಾಗಿ ಜೊತೆಗೆ ಎಲೆಮರೆ ಕಾಯಿಯಂತೆ ಸಮಾಜ ಸೇವೆಯಲ್ಲಿ ತೊಡಗಿ ರಾಜ್ಯ ಮತ್ತು ದೇಶದ ಜನಮಾನಸದಲ್ಲಿ ಉಳಿದಿದ್ದಾರೆ. ಅವರ ಸಾವು ರಾಜ್ಯದ ಜನತೆಗೆ ತುಂಬಲಾರದ ನಷ್ಟ ಆಗಿದೆ ಎಂಬುದಕ್ಕೆ ವರ್ಷವಾದರೂ ಅವರನ್ನು ರಾಜ್ಯದ ಜನತೆ ಮರೆತ್ತಿಲ್ಲ. ಯುವಕರು ಪುನೀತ್ ಅವರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಜು ಎಂದು ಕರೆ ನೀಡಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯುಬ್ ಪೈಲ್ವಾನ್, ಮಹಾನಗರ ಪಾಲಿಕೆ ವಿಪಕ್ಷ ನಾಯಕ ಜಿ.ಎಸ್. ಮಂಜುನಾಥ್, ಸದಸ್ಯರಾದ ಚಮನ್ ಸಾಬ್ , ಗಣೇಶ್ ಹುಲ್ಮನಿ, ಮಹಿಳಾ ಕಾಂಗ್ರೆಸ್ ನ ಸುಷ್ಮಾ ಪಾಟೀಲ್ , ಆಶಾ ರಾಣಿ ಮುರಳಿ, ಶುಭ ಮಂಗಳ , ಗೀತಾ ಚಂದ್ರಶೇಖರ್, ರಾಘವೇಂದ್ರ ಗೌಡ, ಶಾಮನೂರ್ ಕುಮಾರ್ , ಡೋಲಿ ಚಂದ್ರು, ರವಿ ಶಿವಾಜಿ ರಾವ್ , ಶ್ರೀಕಾಂತ್ ಬಗೆರ , ಯುವರಾಜ್ ಮತ್ತಿತರರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top