ದಾವಣಗೆರೆ: ಸುರಕ್ಷತೆ ಮತ್ತು ಭದ್ರತಾ ವ್ಯವಸ್ಥೆ ಮತ್ತು ದಾಖಲೆಗಳ ನಿರ್ವಹಣೆಯ ಪರಿಣಾಮಕಾರಿ ಅನುಷ್ಠಾನಕ್ಕೆ ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ ಗೆ ನಗರ ಸಾರಿಗೆಯಲ್ಲಿ ಶ್ರೇಷ್ಠತೆಯ ಪ್ರಶಸ್ತಿ ಲಭಿಸಿದೆ ಎಂದು ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ತಿಳಿಸಿದೆ.
ಈ ವಿಭಾಗದಲ್ಲಿ ಪ್ರಶಸ್ತಿ ಪಡೆದ ಕರ್ನಾಟಕದ ಏಕೈಕ ನಗರ ದಾವಣಗೆರೆಯಾಗಿದೆ. ಯುಎಂಐ ಸಮ್ಮೇಳನದಲ್ಲಿ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರು ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ವಿಶೇಷ ಕರ್ತವ್ಯ ಅಧಿಕಾರಿ ಮತ್ತು ಜಂಟಿ ಕಾರ್ಯದರ್ಶಿ ಜೈದೀಪ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನವೆಂಬರ್ 6 ರಂದು ಕೊಚ್ಚಿಯಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ. ನಗರದಾದ್ಯಂತ 248 ಎಚ್ ಡಿ ಸಿಸಿಟಿವಿ ಅಳವಡಿಕೆ, 23 ಜಂಕ್ಷನ್ ಗಳಲ್ಲಿ ಸಿಗ್ನಲ್ ಲೈಟಿಂಗ್ ಮತ್ತು ಇಂಟೆಲಿಜೆಂಟ್ ಟ್ರಾನ್ಸಿಟ್ ಮ್ಯಾನೇಜ್ಮೆಂಟ್ ಸಿಸ್ಟಂ ಅಳವಡಿಕೆ, ತಾಂತ್ರಿಕ ಉನ್ನತೀಕರಣ ಪ್ರಶಸ್ತಿಗೆ ಪಾತ್ರವಾಗಿದೆ ಎಂದು ಡಿಎಸ್ಸಿಎಲ್ ನ ಎಂಡಿ ರವೀಂದ್ರ ಬಿ ಮಲ್ಲಾಪುರ ಹೇಳಿದ್ದಾರೆ.