ದಾವಣಗೆರೆ: ಕಾಂಗ್ರೆಸ್ ಪಕ್ಷದ ನಿರುದ್ಯೋಗಳಿಂದ ದಿನಕ್ಕೊಂದು ಪ್ರತಿಭಟನೆ ಮಾಡುವ ಮೂಲಕ ತಮ್ಮ ನಾಯಕರ ಓಲೈಕೆ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಕಿಡಿಕಾರಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಲೋಕಯುಕ್ತ ಅದಿಕಾರಿಗಳು ಇತ್ತೀಚೆಗೆ ಪಾಲಿಕೆ ನೌಕರರೊಬ್ಬನನ್ನು ಬಂಧನ ಮಾಡಿದ್ದಾರೆ. ಈ ಪ್ರಕರಣದಲ್ಲಿ ಸಂಸದರು ಸಚಿವರ ಮೇಲೆ ವ ಆರೋಪ ಮಾಡಿ ಕಾಂಗ್ರೆಸ್ ನವರು ಪಾಲಿಕೆ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ. ತಮ್ಮ ನಾಯಕರನ್ನು ಮೆಚ್ಚಿಸುವ ಸಲುವಾಗಿ ನಿರುದ್ಯೋಗಿ ಕಾಂಗ್ರೆಸ್ ಕಾರ್ಯಕರ್ತರು ಇಂತಹ ಹೋರಾಟ ಮಾಡುತ್ತಿದ್ದಾರೆ.
ಕಾಂಗ್ರೆಸ್ ನವರು ಸಂಸದರನ್ನು ನಿಂದಿಸಿದರೆ ದೊಡ್ಡವರಾಗುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ. ಸಂಸದರ ಬಗ್ಗೆ ಹೆಚ್ಚು ಮಾತನಾಡಿದರೆ ತಮ್ಮ ಮೌಲ್ಯ ಹೆಚ್ಚಾಗುತ್ತದೆ ಅಂದುಕೊಂಡಿದ್ದಾರೆ. ಇದರಿಂದ ಕಾಂಗ್ರೆಸ್ ಮುಖಂಡರು ಯಾವ ಹಂತಕ್ಕೆ ತಲುಪಿದ್ದಾರೆ ಎನ್ನುವುದು ತಿಳಿಯುತ್ತದೆ ಎಂದರು.
ಸಂಸದರು ತಮ್ಮಸ್ವಂತ ವೆಚ್ಚದಲ್ಲಿ ಅನೇಕ ಅಭಿವೃದ್ಧಿ ಕಾರ್ಯ ಮಾಡದ್ದಾರೆ.ಕಾಂಗ್ರೆಸ್ ನ ಕೆಲ ಮುಖಂಡರಿಗೆ ಆಕಾಶಕ್ಕೆ ಉಗಿದರೆ ತಮ್ಮ ಮೇಲೆಯೇ ಸಿಡಿಯುತ್ತದೆ ಎಂಬ ಅರಿವು ಇಲ್ಲ. ಏನಾದರೂ ಮಾಡಿ ಜನಪ್ರಿಯತೆ ಗಳಿಸಬೇಕೆಂಬುದು ಕಾಂಗ್ರೆಸ್ ನ ಕೆಲ ಮುಖಂಡರಿಗಿದೆ. ಪಾಲಿಕೆಯಲ್ಲಿ ಭ್ರಷ್ಟಾಚಾರದ ಪಿತಾಮಹರು ಕಾಂಗ್ರೆಸ್ ನವರು ಅವರಿಂದ ಪಾಠಕಲಿಯುವ ಅವಶ್ಯಕತೆ ಇಲ್ಲ.ಅನಾವಶ್ಯಕ ಹೇಳಿಕೆ ನೀಡುವುದನ್ನು ಬಿಟ್ಟು ನಿಮ್ಮ ಪಕ್ಷದ ಕೆಲಸ ಮಾಡಿ. ಸಂಸದರಿಗೆ ಪರ್ಸೆಂಟೇಜ್ ನೀಡಲಾಗುತ್ತದೆ ಎಂದು ಹೇಳಿರುವುದು ಖಂಡನೀಯ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಯಶವಂತ ರಾವ್ ಜಾಧವ್, ಶ್ರೀನಿವಾಸ್ ದಾಸಕರಿಯಪ್ಪ, ಬಿ.ಎಸ್. ಜಗದೀಶ್, ಡಿ.ಎಸ್. ಶಿವಶಂಕರ್, ಪ್ರಕಾಶ್, ಗೋವಿಂರಾಜ್, ಹಾಗೂ ಹೆಚ್.ಪಿ. ವಿಶ್ವಾಸ್ ಉಪಸ್ಥಿತರಿದ್ದರು.



