Connect with us

Dvgsuddi Kannada | online news portal | Kannada news online

ದಾವಣಗೆರೆ: ಸಫಾಯಿ ಕರ್ಮಚಾರಿ, ಪೌರಕಾರ್ಮಿಕರಿಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

davangere palike22

ದಾವಣಗೆರೆ

ದಾವಣಗೆರೆ: ಸಫಾಯಿ ಕರ್ಮಚಾರಿ, ಪೌರಕಾರ್ಮಿಕರಿಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸಫಾಯಿ ಕರ್ಮಚಾರಿ/ ಪೌರಕಾರ್ಮಿಕರು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳ ನೋಂದಾಯಿತ ಸಂಘ ಸಂಸ್ಥೆಗಳಿಗೆ ಸಕ್ಕಿಂಗ್ & ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ಶೆ.75 ರಷ್ಟು ಸಹಾಯಧನ ನೀಡುವ ಯೋಜನೆ. ಹಾಗೂ ಅವರ ಮಕ್ಕಳಿಗೆ ಆನ್‍ಲೈನ್ ಪಾಠ ಕೇಳಲು ಹಾಗೂ ವಿದ್ಯಾಭ್ಯಾಸಕ್ಕಾಗಿ ಟ್ಯಾಬ್ ವಿತರಣಾ ಯೋಜನೆ ಮತ್ತು ಮಹಿಳಾ ಸಫಾಯಿ ಕರ್ಮಚಾರಿ/ಪೌರಕಾರ್ಮಿಕರು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್ಸ್‍ಗಳಿಗೆ ದ್ವಿಚಕ್ರ ವಾಹನ ಸೌಲಭ್ಯದ ಯೋಜನೆಗಳಡಿ 2021-22ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾಪೇಕ್ಷಿಗಳು ನಿಗಮದ ವೆಬ್‍ಸೈಟ್ www.ksskdc.kar.nic.in ಮೂಲಕ ಅವಶ್ಯ ದಾಖಲಾತಿಗಳೊಂದಿಗೆ ಅ.25 ರೊಳಗೆ ಅರ್ಜಿಗಳನ್ನು ಅಪ್‍ಲೋಡ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ, ನಂ.337/16ಎ-16 ಗಣೇಶ ಲೇಔಟ್, 1ನೇ ಕ್ರಾಸ್, ಪಿ.ಬಿ.ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top