ದಾವಣಗೆರೆ: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದಿಂದ ಸಫಾಯಿ ಕರ್ಮಚಾರಿ/ ಪೌರಕಾರ್ಮಿಕರು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್ಸ್ ಗಳ ನೋಂದಾಯಿತ ಸಂಘ ಸಂಸ್ಥೆಗಳಿಗೆ ಸಕ್ಕಿಂಗ್ & ಜಟ್ಟಿಂಗ್ ಯಂತ್ರಗಳನ್ನು ಖರೀದಿಸಲು ಶೆ.75 ರಷ್ಟು ಸಹಾಯಧನ ನೀಡುವ ಯೋಜನೆ. ಹಾಗೂ ಅವರ ಮಕ್ಕಳಿಗೆ ಆನ್ಲೈನ್ ಪಾಠ ಕೇಳಲು ಹಾಗೂ ವಿದ್ಯಾಭ್ಯಾಸಕ್ಕಾಗಿ ಟ್ಯಾಬ್ ವಿತರಣಾ ಯೋಜನೆ ಮತ್ತು ಮಹಿಳಾ ಸಫಾಯಿ ಕರ್ಮಚಾರಿ/ಪೌರಕಾರ್ಮಿಕರು ಹಾಗೂ ಮ್ಯಾನುಯಲ್ ಸ್ಕ್ಯಾವೆಂಜರ್ಸ್ಗಳಿಗೆ ದ್ವಿಚಕ್ರ ವಾಹನ ಸೌಲಭ್ಯದ ಯೋಜನೆಗಳಡಿ 2021-22ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಬಯಸುವ ಅರ್ಹ ಫಲಾಪೇಕ್ಷಿಗಳು ನಿಗಮದ ವೆಬ್ಸೈಟ್ www.ksskdc.kar.nic.in ಮೂಲಕ ಅವಶ್ಯ ದಾಖಲಾತಿಗಳೊಂದಿಗೆ ಅ.25 ರೊಳಗೆ ಅರ್ಜಿಗಳನ್ನು ಅಪ್ಲೋಡ್ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ದಿ ನಿಗಮ, ನಂ.337/16ಎ-16 ಗಣೇಶ ಲೇಔಟ್, 1ನೇ ಕ್ರಾಸ್, ಪಿ.ಬಿ.ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



