Connect with us

Dvgsuddi Kannada | online news portal | Kannada news online

ದಾವಣಗೆರೆ: ಡಿ.24ರಿಂದ ಮೂರು ದಿನ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ 23ನೇ ಮಹಾ ಅಧಿವೇಶನ

IMG 20221117 WA0002

ದಾವಣಗೆರೆ

ದಾವಣಗೆರೆ: ಡಿ.24ರಿಂದ ಮೂರು ದಿನ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ 23ನೇ ಮಹಾ ಅಧಿವೇಶನ

ದಾವಣಗೆರೆ: ಡಿ.24 ರಿಂದ 26ರ ವರೆಗೆ ನಗರದ ಎಂಬಿಎ ಕಾಲೇಜು ಮೈದಾನದಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನ ನಡೆಯಲಿದೆ ಎಂದು ಮಹಾ ಸಭಾ ರಾಷ್ಟ್ರೀಯ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

ಅಧಿವೇಶನ ಪ್ರತಿನಿಧಿಗಳ ನೋಂದಣಿ ಪತ್ರ ಬಿಡುಗಡೆ ಮಾಡಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿವೇಶನ ಉದ್ಘಾಟಿಸುವರು. ಎರಡನೇ ದಿನ ಮಹಿಳಾ ಸಮಾವೇಶ, ಯುವ ಸಮಾವೇಶ ನಡೆಯಲಿವೆ. ಮೂರನೇ ದಿನ ಧಾರ್ಮಿಕ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ನಾಡಿನ ವಿವಿಧ ಮಠಾಧೀಶರು ಪಾಲ್ಗೊಳ್ಳುವರು. ಈ ವೇಳೆ ವಿವಿಧ ವಿಷಯಗಳ ಚರ್ಚಾ ಗೋಷ್ಠಿ, ಕೃಷಿ ಮೇಳ ನಡೆಯಲಿದೆ ಎಂದರು.

ಅಧಿವೇಶನಕ್ಕ ಒಂದು ಲಕ್ಷ ಜನರು ಆಗಮಿಸುವ ನಿರೀಕ್ಷೆಯಿದ್ದು, ಅವರಿಗೆ ಮೂರು ದಿನಗಳ ಕಾಲ ವಸತಿ, ಊಟ, ತಿಂಡಿಯ ವ್ಯವಸ್ಥೆ ಮಾಡಲಾಗುವುದು. ಎಲ್ಲ ಉಪ ಪಂಗಡಗಳೂ ಒಂದಾಗಬೇಕು ಎಂಬುದು ನಮ್ಮ ಆಶಯ. ಆಗ ಸಮಾಜದ ಜನಸಂಖ್ಯೆ 2 ಕೋಟಿಯನ್ನು ದಾಟುತ್ತದೆ. ವೀರಶೈವ ಲಿಂಗಾಯತ ಸಮಾಜಕ್ಕೆ ಕೇಂದ್ರ ಸರ್ಕಾರದಿಂದ ಒಬಿಸಿ ಮೀಸಲಾತಿ, ರಾಜ್ಯ ಸರ್ಕಾರದಿಂದ ಉಪ ಪಂಗಡಗಳಿಗೆ ಮೀಸಲಾತಿ ಸಿಗಬೇಕು. ನಗರದ ಶಾಮನೂರು ರಸ್ತೆಯಲ್ಲಿರುವ ನಿವೇಶನದಲ್ಲಿ ಮಹಿಳಾ ಹಾಸ್ಟೆಲ್ ನಿರ್ಮಿಸುವ ಕುರಿತು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮಹಾಸಭಾ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾರ್ , ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಎ.ಎಸ್. ವೀರಣ್ಣ, ಎಸ್.ಎಸ್. ಗಣೇಶ್, ಜಿ. ಶಿವಯೋಗಪ್ಪ, ಕಿರುವಾಡಿ ಸೋಮಣ್ಣ, ಸಿದ್ದೇಶ್, ಬಿ.ಜಿ. ರಮೇಶ್ ಮತ್ತಿತರರು ಇದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top