Connect with us

Dvgsuddi Kannada | online news portal | Kannada news online

ದಾವಣಗೆರೆ: ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ ಅಖಿಲ ಭಾರತ ಸಹ ಖಜಾಂಚಿಯಾಗಿ ರಾಘವೇಂದ್ರ ನಾಯರಿ ಆಯ್ಕೆ

IMG 20221118 WA0001

ದಾವಣಗೆರೆ

ದಾವಣಗೆರೆ: ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ ಅಖಿಲ ಭಾರತ ಸಹ ಖಜಾಂಚಿಯಾಗಿ ರಾಘವೇಂದ್ರ ನಾಯರಿ ಆಯ್ಕೆ

ದಾವಣಗೆರೆ: ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ಅಖಿಲ ಭಾರತ ಸಹ ಖಜಾಂಚಿಯಾಗಿ ದಾವಣಗೆರೆಯ ಕೆ.ರಾಘವೇಂದ್ರ ನಾಯರಿ ಅವರು ನೇಮಕವಾಗಿದ್ದಾರೆ. ನವೆಂಬರ್ 16 ಹಾಗೂ 17 ರಂದು ಕೇರಳದ ಎರ್ನಾಕುಲಂನಲ್ಲಿ ನಡೆದ ಯೂನಿಯನ್‌ನ ಕೇಂದ್ರ ಸಮಿತಿ ಸಭೆಯಲ್ಲಿ ಈ ನೇಮಕ ಮಾಡಲಾಗಿದೆ. ಇತ್ತೀಚಿಗೆ ಕರ್ನಾಟಕ ಪ್ರದೇಶ ಗ್ರಾಮೀಣ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಷನ್‌‌ನ ಅಧ್ಯಕ್ಷರಾಗಿ ಕೆಪಿಬಿಇಎಫ್ ನಿಂದ ನೇಮಕವಾಗಿದ್ದಾರೆ ಎಂದು ಕೆನರಾ ಬ್ಯಾಂಕ್ ಎಂಪ್ಲಾಯೀಸ್ ಯೂನಿಯನ್‌ನ ರಾಜ್ಯ ಸಮಿತಿ ಸದಸ್ಯ ಕೆ.ವಿಶ್ವನಾಥ್ ಬಿಲ್ಲವ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲೆಗೆ ಪ್ರಪ್ರಥಮ ಬಾರಿಗೆ ಈ ಹುದ್ದೆಯು ದೊರೆತಿರುವುದು ಜಿಲ್ಲಾ ಬ್ಯಾಂಕ್ ನೌಕರರ ಸಂಘಕ್ಕೆ ಮತ್ತು ಜಿಲ್ಲೆಯ ಬ್ಯಾಂಕ್ ಉದ್ಯೋಗಿಗಳಿಗೆ ಹೆಮ್ಮೆಯ ವಿಷಯವಾಗಿದೆ. ಕೆ.ರಾಘವೇಂದ್ರ ನಾಯರಿಯವರು ಪ್ರಸ್ತುತ ಕರ್ನಾಟಕ ಪ್ರದೇಶ ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್‌ನ ಜಂಟಿ ಕಾರ್ಯದರ್ಶಿಯಾಗಿ, ದಾವಣಗೆರೆ ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಕೆನರಾ ಬ್ಯಾಂಕ್ ನೌಕರರ ಸಂಘದ ರಾಜ್ಯ ಸಹ ಕಾರ್ಯದರ್ಶಿಯಾಗಿ ಹಾಗೂ ಅಸಂಘಟಿತ ಕಾರ್ಮಿಕ ವಲಯದ ಮುಖಂಡರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಜಿಲ್ಲಾ ಬ್ಯಾಂಕ್ ನೌಕರರ ಸಂಘದ ಖಜಾಂಚಿಯೂ ಆಗಿರುವ ಕೆ.ವಿಶ್ವನಾಥ್ ಬಿಲ್ಲವ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top