ದಾವಣಗೆರೆ: ವಿದ್ಯುತ್ ಮೇಲು ಮಾರ್ಗಗಳ ಗೋಪುರ ಕೆಳಗೆ ಕಟ್ಟಡ ನಿರ್ಮಾಣ ಮಾಡಿದ್ರೆ ನಿಯಮ ಬಾಹಿರ; ಬೆಸ್ಕಾಂ ಎಚ್ಚರಿಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ವಿದ್ಯುತ್ ಮೇಲು ಮಾರ್ಗಗಳ ಕೆಳಗೆ ಹಾಗೂ ಪಕ್ಕದಲ್ಲಿ ಹಾದು ಹೋಗುವ ಮಾರ್ಗಗಳ ಸಮೀಪದಲ್ಲಿ ಕಟ್ಟಡಗಳನ್ನು ನಿರ್ಮಿಸುತ್ತಿರುವುದು ಸಂದರ್ಭದಲ್ಲಿ ಸೂಕ್ತ ಅಂತರ ಕಾಪಾಡದೇ ಕಟ್ಟಡ ನಿರ್ಮಾಣ ಮಾಡುವುದು ನಿಯಮ ಬಾಹಿರವಾಗಿರುತ್ತದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ನಿಬಂಧನೆಗಳನ್ನು ಉಲ್ಲಂಘಿಸಿ ಕಟ್ಟಡಗಳನ್ನು ಸುರಕ್ಷತಾ ಅಂತರ ಕಾಪಾಡದೇ ನಿರ್ಮಿಸುವುದು, ನಿರ್ಮಿಸಿರುವ ಕಟ್ಟಡಗಳಲ್ಲಿ ವಾಸಿಸುತ್ತಿರುವುದು ಹಾಗೂ ನಿಯಮಬಾಹಿರವಾಗಿ ನಿರ್ಮಿಸುವ ಕಟ್ಟಡಗಳ ಛಾವಣೆಗಳ ಮೇಲೆ ಇತರೆ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವುದು, ವಿದ್ಯುತ್ ಕಂಬ/ಗೋಪುರಗಳಿಗೆ ಹೊಂದಿಕೊಂಡಂತೆ ಕಟ್ಟಡಗಳನ್ನು/ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸುವುದು ಮತ್ತು ಕಂಬಗಳಿಗೆ ಬ್ಯಾನರ್‍ಗಳು ಮತ್ತು ಬಂಟಿಂಗ್‍ಗಳನ್ನು ಕಟ್ಟುವುದು, ವಿದ್ಯುತ್ ಮಾರ್ಗದ ಕೆಳಗಡೆ ಸಾರ್ವಜನಿಕ/ಮಕ್ಕಳ ಆಟದ ಉದ್ಯಾನವನ ನಿರ್ಮಿಸುವುದು, ವಿದ್ಯುತ್ ಮಾರ್ಗಗಳ ಸನಿಹದಲ್ಲಿ ಗಾಳಿಪಟ ಹಾರಿಸುವುದು ಮತ್ತು ಬಟ್ಟೆಗಳನ್ನು ಒಣಗಿಸುವುದು ಅತ್ಯಂತ ಅಪಾಯಕಾರಿಯಾಗಿರುತ್ತದೆ ಮತ್ತುಇಂತಹ ಚಟುವಟಿಕೆಗಳಿಂದ ವಿದ್ಯುತ್ ಅಪಘಾತಗಳು ಸಂಭವಿಸಿ ಸಾರ್ವಜನಿಕರ ಪ್ರಾಣ ಹಾನಿ ಮತ್ತು ಆಸ್ತಿ-ಪಾಸ್ತಿಗಳಿಗೆ ನಷ್ಟ ಸಂಭವಿಸುತ್ತಿವೆ.

ಸಿ.ಇ.ಎ. ಅಧಿನಿಯಮಗಳನುಸಾರ ಅಧಿಕ ಒತ್ತಡ ವಿದ್ಯುತ್ ಮಾರ್ಗಗಳಿಂದ ಕನಿಷ್ಟ ಸಮಾನಾಂತರವನ್ನು ಕಡ್ಡಾಯವಾಗಿ ಪಾಲಿಸುವುದು ಎಲ್ಲಾ ಸಾರ್ವಜನಿಕರ ಹೊಣೆಯಾಗಿದ್ದು, ಸುರಕ್ಷತಾ ದೃಷ್ಟಿಯಿಂದ ಅಸುರಕ್ಷಿತ ಕಟ್ಟಡದ ಭಾಗಗಳನ್ನು ತೆರವುಗೊಳಿಸಬೇಕು.ನಿಯಮಬಾಹಿರವಾಗಿ ನಿರ್ಮಿಸಿರುವ/ನಿರ್ಮಿಸುತ್ತಿರುವ ಕಟ್ಟಡಗಳು ಹಾಗೂ ಅಸುರಕ್ಷಿತ ಚಟುವಟಿಕೆಗಳಿಂದ ಆಗುವ ವಿದ್ಯುತ್ ಅಪಘಾತಗಳಿಂದ ಸಾರ್ವಜನಿಕರಿಗೆ ಪ್ರಾಣಹಾನಿ ಹಾಗೂ ಆಸ್ತಿ ಪಾಸ್ತಿಗೆ ನಷ್ಟವಾದಲ್ಲಿ ಹಾಗೂ ಇನ್ನಿತರ ಯಾವುದೇ ಅವಘಡಗಳಿಗೆ ಬೆ.ವಿ.ಕಂ. ಯಾವುದೇ ರೀತಿ ಜವಾಬ್ದಾರಿಯಾಗಿರುವುದಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *