Connect with us

Dvgsuddi Kannada | online news portal | Kannada news online

ದಾವಣಗೆರೆ: ದಕ್ಷಿಣ ವಲಯ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಕರ್ನಾಟಕ ರಾಜ್ಯೋತ್ಸವ

IMG 20221127 WA0000

ದಾವಣಗೆರೆ

ದಾವಣಗೆರೆ: ದಕ್ಷಿಣ ವಲಯ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ಕರ್ನಾಟಕ ರಾಜ್ಯೋತ್ಸವ

ದಾವಣಗೆರೆ: ತಾಲ್ಲೂಕು ದಕ್ಷಿಣ ವಲಯ ಸ್ಕೌಟ್ಸ್ ಮತ್ತು ಗೈಡ್ಸ್ ನ ನೇತಾಜಿ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಬಾಪೂಜಿ ಹೈಸ್ಕೂಲ್ ಆವರಣದಲ್ಲಿ ಕರ್ನಾಟಕ ರಾಜ್ಯೋತ್ಸವ ನಿಮಿತ್ಯ ಪ್ರತಿ ವರ್ಷದಂತೆ ಈ ವರ್ಷವೂ ನಡೆದ ಕರ್ನಾಟಕ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ ವಾಮದೇವಪ್ಪ ಉದ್ಘಾಟಿಸಿ ಮಾತನಾಡಿ, ಕನ್ನಡ ನಾಡಿನ ವೈಭವ ಮತ್ತು ಸಾಂಸ್ಕೃತಿಕವನ್ನು ಜಿಲ್ಲಾವಾರು ಪ್ರದರ್ಶನ ಮಾಡಿರುವ ವಿದ್ಯಾರ್ಥಿಗಳ ಶ್ರಮವನ್ನು ಕೊಂಡಾಡಿದರು. ದಕ್ಷಿಣ ವಲಯ ಸ್ಕೌಟ್ಸ್ ಮತ್ತು ಗೈಡ್ಸ್ ನ ಅಧ್ಯಕ್ಷ ಎ ಆರ್ ಉಜ್ಜನಪ್ಪ ಅಧ್ಯಕ್ಷತೆ ವಹಿಸಿದ್ದರು. ಅವರು ಕರ್ನಾಟಕ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಅಭಿನಂದಿಸಿ ಮಕ್ಕಳಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಅರಿವು ಮೂಡಿಸಲು ಈ ಮೂಲಕ ಸಹಾಯವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಮಹಾಲಿಂಗಪ್ಪ ಎ , ಜಿಲ್ಲಾ ಸ್ಕೌಟ್ಸ್ ಆಯುಕ್ತ ಎ ಪಿ ಷಡಾಕ್ಷರಪ್ಪ , ಎ ಡಿ ಹಾಲಪ್ಪ, ಸಿದ್ದಗಂಗಾ ಶಾಲೆಯ ಶಶಿಕಲಾ , ಜೆ ಎಸ್ ವಿಜಯಕುಮಾರ್ , ಕಾವೇರಿ ಪಿ ಮತ್ತು ಇತರೆ ಯವರು ಭಾಗವಹಿಸಿದ್ದರು ಆರಂಭದಲ್ಲಿ ವಿದ್ಯಾರ್ಥಿಗಳು ಕರ್ನಾಟಕದ ವಿವಿಧ ಪ್ರದೇಶಗಳ ಉಡುಪಿಯಲ್ಲಿ ಎ ವಿ ಕೆ ಮಹಿಳಾ ಕಾಲೇಜು ಮುಂಭಾಗದಲ್ಲಿ ಮೆರವಣಿಗೆ ನಡೆಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top