ದಾವಣಗೆರೆ: ಜಾನುವಾರುಗಳಿಗೆ ಮತ್ತೆ ಉಲ್ಬಣಿಸಿದ ಚರ್ಮಗಂಟು ರೋಗ; ಸಂತೆ, ಜಾತ್ರೆ, ಸಾಗಾಣಿಕೆ ನಿಷೇಧ; ಡಿಸಿ‌ ಆದೇಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಮತ್ತೆ ವ್ಯಾಪಕವಾಗಿ ಹರಡುತ್ತಿರುವ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಾದ್ಯಂತ ಡಿಸೆಂಬರ್ 12ರವರೆಗೆ ಜಾನುವಾರು ಸಂತೆ, ಜಾತ್ರೆ ಹಾಗೂ ಜಾನುವಾರು ಸಾಗಾಣಿಕೆ ನಿಷೇಧಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಆದೇಶಿಸಿದ್ದಾರೆ.

ಜಿಲ್ಲೆಯ ದಾವಣಗೆರೆ, ಚನ್ನಗಿರಿ, ಹರಿಹರ, ಹೊನ್ನಾಳಿ, ನ್ಯಾಮತಿ ಮತ್ತು ಜಗಳೂರು ತಾಲ್ಲೂಕುಗಳಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗವು ಕಾಣಿಸಿಕೊಂಡಿದ್ದು ರೋಗ ವ್ಯಾಪಾಕವಾಗಿ ಹರಡುವ ಸಾಧ್ಯತೆ ಇರುತ್ತದೆ. ಜಾನುವಾರುಗಳಿಗೆ ರೋಗದ ಪರೀಕ್ಷೆಯನ್ನು ಐ.ಸಿ.ಎ.ಆರ್-ನಿವಿಧಿ ಬೆಂಗಳೂರು ಅವರಿಂದ ಮಾಡಲಾಗಿದ್ದು ಇನ್ನುಳಿದ ಜಾನುವಾರುಗಳಿಗೆ ನಗರದ ಪಶು ಆಸ್ಪತ್ರೆ ಆವರಣದಲ್ಲಿರುವ ಐಹೆಚ್‍ಎ&ವಿಬಿ ರವರ ರೆಪರಲ್ ಪ್ರಯೋಗಾಲಯದಲ್ಲಿ ಮಾಡಲು ಸೂಕ್ಷ್ಮ ವ್ಯವಸ್ಥೆ ಇರುತ್ತದೆ.

ದಿ:17.11.2022ರವರೆಗೆ ಒಟ್ಟು 436 ಗ್ರಾಮಗಳಲ್ಲಿ 18,388 ಜಾನುವಾರುಗಳಿಗೆ ಈ ರೋಗವು ಕಂಡುಬರುತ್ತದೆ.ರೋಗ ವ್ಯಾಪಕವಾಗಿ ಹರಡುತ್ತಿರುವುದರಿಂದ ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮ ಗಂಟು ರೋಗ ಉಲ್ಬಣವಾಗಿರುವುದರಿಂದ ಈ ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 12 ರವರೆಗೆ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *