ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಶಾಸಕ ಎಸ್.ವಿ.ರಾಮಚಂದ್ರ ನೇಮಕಕ್ಕೆ ವಿರೋಧ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಶಾಸಕ ಎಸ್.ವಿ. ರಾಮಚಂದ್ರ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ ಮಾಡಿದ್ದಕ್ಕೆ ವಿರೋಧ ವ್ಯಕ್ತವಾಗಿದೆ.

ಶಿವಕುಮಾರಸ್ವಾಮಿ ಕ್ರೆಡಿಟ್ ಸೊಸೈಟಿಯ ನಿರ್ದೇಶಕ ಕುಂದೂರು ರಾಜಣ್ಣ ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಿ.ವಿ. ಚಂದ್ರಶೇಖರ್ ಅವರ ನಿಧನದಿಂದಾಗಿ ನಿರ್ದೇಶಕರ ಸ್ಥಾನ ಖಾಲಿಯಾಗಿತ್ತು. ಈ ಸ್ಥಾನಕ್ಕೆ ಕೆ.ಬಿ. ಶಂಕರನಾರಾಯಣ, ವೈ.ಮಲ್ಲೇಶ್ , ಜೆ. ಸೋಮನಾಥ್, ತಿಮ್ಮಣ್ಣ ಸೇರಿದಂತೆ ಅನೇಕ ಹಿರಿಯ ಮುಖಂಡರಿದ್ದರು. ಹಿರಿಯರೆಲ್ಲರನ್ನು ಕಡೆಗಣಿಸಿ ಶಾಸಕರನ್ನು ನೇಮಕ ಮಾಡಿದ್ದು ಸರಿಯಲ್ಲ ಎಂದು ಆಕ್ಷೇಪಿಸಿದ್ದಾರೆ.

ಜಗಳೂರು ಮೀಸಲು ಕೇತ್ರದಿಂದ ಆಯ್ಕೆಯಾದ ಶಾಸಕರು ರಾಮಚಂದ್ರ ಅವರು, ಈಗಾಗಲೇ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹುದ್ದೆಯಲ್ಲಿದ್ದಾರೆ. ಇದರ ಜತೆಗೆ ಈಗ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಬಿಜೆಪಿ ರಾಷ್ಟ್ರ, ರಾಜ್ಯ ನಾಯಕರಿಗೆ ದೂರು ನೀಡಲಾಗುವುದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *