ದಾವಣಗೆರೆ: ಜಿಲ್ಲೆಯಲ್ಲಿ ಪಡಿತರ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅನ್ನಭಾಗ್ಯ ಯೋಜನೆಯಡಿ ಆಹಾರ ಧಾನ್ಯ ವಿತರಣೆಯನ್ನು ಮಾಡಲಾಗುತ್ತಿದೆ. ಎನ್ಎಫ್ಎಸ್ಎ ಅಡಿ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 15 ಕೆಜಿ ಅಕ್ಕಿ ಮತ್ತು ಬಿಪಿಎಲ್ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆಜಿಯಂತೆ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ.
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಗೆ ಅನುಗುಣವಾಗಿ ಹಂಚಿಕೆಯಾಗಿರುವ ಆಹಾರಧಾನ್ಯದ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಗಳಿಂದ ಪಡೆದುಕೊಳ್ಳುವುದು. ವಿತರಣೆಯಾಗುವ ಆಹಾರಧಾನ್ಯ ಕಡಿಮೆ ಪ್ರಮಾಣವನ್ನು ನ್ಯಾಯಬೆಲೆ ಅಂಗಡಿಕಾರರು ನೀಡಿದಲ್ಲಿ ಪಡಿತರ ಪ್ರದೇಶದ ಆಹಾರ ನಿರೀಕ್ಷಿಕರು, ತಾಲ್ಲೂಕು ಆಹಾರ ಶಿರಸ್ತೇದಾರು ಹಾಗೂ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆಹಾರ ಶಾಖೆಗೆ ದೂರು ಸಲ್ಲಿಸಿದಲ್ಲಿ ಅಂತವರ ವಿರುದ್ಧ ನಿಯಮಾನುಸಾರ ಕ್ರಮಕೈಗೊಳ್ಳಲಾಗುವುದೆಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



