ದಾವಣಗೆರೆ : ಮಹಾನಗರ ಪಾಲಿಕೆ ಉಪ ಮೇಯರ್ ಸೌಮ್ಯನರೇಂದ್ರ ಕುಮಾರ್ ಕೊರೊನಾ ವಾರಿಯರ್ಸ್ ಸನ್ಮಾನಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು.
ನಾಗರಾಜು ಲೋಕಿಕೆರೆ ಅಭಿಮಾನಿ ಬಳಗ ಆಯೋಜಿಸಿದ್ದ ಕಾರ್ಯಕ್ರದಲ್ಲಿ ಸೌಮ್ಯ ನರೇಂದ್ರ ಕುಮಾರ್ , ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಿದ ಪೌರ ಕಾರ್ಮಿಕರಿಗೆ ಸನ್ಮಾನಿಸಿ ಸಮವಸ್ತ್ರ ಮತ್ತು ಕುಕ್ಕರ್ ಉಡುಗೊರೆ ನೀಡಿದರು.
ಈ ವೇಳೆ ಮಾತನಾಡಿದ ಅವರು ಹುಟ್ಟು ಹಬ್ಬ ಆಚರಣೆ ಸಂಪ್ರದಾಯ ಮಾಡಿಕೊಂಡಿಲ್ಲ ಅಭಿಮಾನಿ ಬಳಗದಿಂದ ಆಯೋಜನೆ ಮಾಡಲಾಗಿದೆ. ಈ ಒಂದು ದಿನ ಸಾರ್ಥಕವಾಗಬೇಕೆಂದು ಪೌರ ಕಾರ್ಮಿಕರಿಗೆ ಸನ್ಮಾನ ಮಾಡಲಾಗಿದೆ. ಕೋವಿಡ್ ಹಿನ್ನೆಲೆ ಪೌರ ಕಾರ್ಮಿಕರು ಪ್ರಾಣ ಪಣಕ್ಕಿಟ್ಟು ಹೋರಾಟ ಮಾಡುತ್ತಿದ್ದಾರೆ ಅವರ ಕಾರ್ಯ ನಿಜಕ್ಕೂ ಶ್ಲಾಘನೀಯ ನನ್ನ ಹುಟ್ಟುಹಬ್ಬ ಹಿನ್ನಲೆ ಅವನ್ನ ಸತ್ಕರಿಸಿದ್ದು ನನ್ನ ಭಾಗ್ಯ ಎಂದರು.
ಈ ಸಂದರ್ಭದಲ್ಲಿ ಶೋಷಿತ ವರ್ಗದ ಮುಖಂಡರಾದ ಬಾಡದ ಆನಂದರಾಜು , ಪಾಲಿಕೆ ಸದಸ್ಯರಾದ ಗೌರಮ್ಮ ಗಿರೀಶ್, ಜಯಮ್ಮ ಗೋಪಿನಾಯ್ಕ್, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ದಿಳ್ಳೆಪ್ಪ, ರೇಖಾ ಸುರೇಶ್ , ಮಂಜುನಾಯ್ಕ್, ಲೋಕಿಕೆರೆ ಮಂಜುನಾಥ್, ಮೋಹಿದ್ದೀನ್ ಉಪಸ್ಥಿತರಿದ್ದರು.



