Connect with us

Dvgsuddi Kannada | online news portal | Kannada news online

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ತತ್ವದಲ್ಲಿ ಶಿಕ್ಷಣ ಸೇವೆ: ಕೆ.ಎಂ ಸುರೇಶ್

ದಾವಣಗೆರೆ

ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ತತ್ವದಲ್ಲಿ ಶಿಕ್ಷಣ ಸೇವೆ: ಕೆ.ಎಂ ಸುರೇಶ್

ದಾವಣಗೆರೆ: ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎನ್ನುವ ತತ್ವದಲ್ಲಿ ನಂಬಿಕೆಯಿಟ್ಟು ಶಿಕ್ಷಣ ಕ್ಷೇತ್ರದ ಮೂಲಕ ಸಮಾಜ ಸೇವೆಯನ್ನು ಮಾಡುವ ಮಹತ್ವಾಕಾಂಕ್ಷೆ ಹೊಂದಿದ್ದೇನೆ ಎಂದು ಶ್ರೀ ಸೋಮೇಶ್ವರ ವಿದ್ಯಾಲಯದ ಗೌರವ ಕಾರ್ಯದರ್ಶಿ ಕೆ‌.ಎಮ್.ಸುರೇಶ್ ಹೇಳಿದರು.

ಬೆಂಗಳೂರಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾಸಂಸ್ಥೆ(ರಿ)ಯ ಉಪಾಧ್ಯಕ್ಷರಾಗಿ ನೂತನವಾಗಿ ಆಯ್ಕೆಗೊಂಡಿರುವ  ನಗರದ ಶ್ರೀ ಸೋಮೇಶ್ವರ ವಿದ್ಯಾಲಯದ ಗೌರವ ಕಾರ್ಯದರ್ಶಿಗಳಾದ ಕೆ‌.ಎಮ್.ಸುರೇಶ್ ಅವರನ್ನು ದಾವಣಗೆರೆ ನಗರದ ಸರಸ್ವತಿ ನಗರದ ಶ್ರೀ ವಿಜಯ ವಿನಾಯಕ ಯುವಕ ನಾಗರಿಕ ವೇದಿಕೆಯ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು. ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡುವುದಾಗಿ  ಕೆ.ಎಂ. ಸುರೇಶ್ ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ವಿಜಯ ವಿನಾಯಕ ಯುವಕ ನಾಗರಿಕ ವೇದಿಕೆಯ ಅಧ್ಯಕ್ಷ ಎಸ್.ಟಿ.ಸೋಮಶೇಖರ್,  ದಾವಣಗೆರೆ ಜಿಲ್ಲೆಯಲ್ಲಿ ಪಠ್ಯ ಶಿಕ್ಷಣ, ಸಂಸ್ಕೃತಿ, ಸಂಸ್ಕಾರ, ಕ್ರೀಡೆ, ಕಲೆ  ಹೀಗೆ ಹತ್ತು ಹಲವು ವಿಭಾಗಗಳಲ್ಲಿ ವಿದ್ಯಾರ್ಥಿಗಳನ್ನು ತಮ್ಮ ಸೋಮೇಶ್ವರ ವಿದ್ಯಾ ಸಂಸ್ಥೆಯಲ್ಲಿ ತರಬೇತಿಗೊಳಿಸುವ ಮೂಲಕ ಕೆ.ಎಮ್.ಸುರೇಶ್ ಅವರು ಶಿಕ್ಣಣ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ.

ಶಿಕ್ಷಣ ಕ್ಷೇತ್ರದಲ್ಲಿ ಏನಾದರೂ ಹೊಸತನ್ನು ತರಬೇಕೆನ್ನುವ ಕನಸುಗಳನ್ನು ಹೊಂದಿರುವ ಕನಸುಗಾರ ಕೆ.ಎಮ್.ಸುರೇಶ್ ಅವರಲ್ಲಿರುವ ವಿಶೇಷವಾದ ಶಕ್ತಿಯನ್ನು ಗುರುತಿಸಿ ಶ್ರೀ ಜಗದ್ಗುರು ರೇಣುಕಾಚಾರ್ಯ ವಿದ್ಯಾ ಸಂಸ್ಥೆಯವರು ತಮ್ಮ ಆಡಳಿತ ಮಂಡಳಿಯಲ್ಲಿ ಉಪಾಧ್ಯಕ್ಷ ಸ್ಥಾನ ನೀಡಿರುವುದು ನಿಜಕ್ಕೂ ದಾವಣಗೆರೆ ನಾಗರಿಕರು ಹೆಮ್ಮೆ ಪಡುವಂತ ಸಂಗತಿಯಾಗಿದೆ. ಬರುವ ದಿನಗಳಲ್ಲಿ ಅವರಿಂದ ಇನ್ನಷ್ಟು ಸೇವೆಗಳು ಸಮಾಜಕ್ಕೆ ಸಿಗುವಂತಾಗಲಿ ಎಂದು ಶುಭ ಹಾರೈಸಿದರು.

ಸಮಾರಂಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಕೆ.ಎಮ್.ವೀರೇಶ್, ವಿಜಯ ವಿನಾಯಕ ಯುವಕ ನಾಗರಿಕ ವೇದಿಕೆಯ ಪದಾಧಿಕಾರಿಗಳಾದ  ಕೆ.ರಾಘವೇಂದ್ರ ನಾಯರಿ, ಎಸ್.ಹೆಚ್. ಚಂದ್ರ ನಾಯ್ಕ್, ಕ್ಯಾಸ್ಯಾ ನಾಯಕ, ಶಾಂತಪ್ಪ ಪೂಜಾರಿ, ಪ್ರೊ.ಎಮ್.ಬಿ.ರೇವಣಸಿದ್ದಪ್ಪ, ತಿಪ್ಪೇಸ್ವಾಮಿ ಪವಾಡಪ್ಳ,  ಪ್ರೊ.ಗಂಗಾಧರಯ್ಯ ಹಿರೇಮಠ, ನಾಗರಾಜ ಮಾಸ್ತರ್, ಕಾಡಜ್ಜಿ ವೀರಪ್ಪ,  ಬಿ.ಎಮ್.ಗದಿಗೇಶ್, ಪ್ರಸಾದ ಬಂಗೇರ, ಶಾಮ್ ನಾಯ್ಕ್, ಹೆಚ್‌. ಪಾಲಾಕ್ಷಪ್ಪ, ಟಿ.ಬಿ.ರಮೇಶ್, ಬಿ.ಶಿವಪುತ್ರಪ್ಪ, ಹೇಮಾ ಪೂಜಾರಿ, ಕಮಲಾ ಸೋಮಶೇಖರ್, ನಾಗೇಶ್ವರಿ ನಾಯರಿ, ಮಂಜುಳಾ ವೆಂಕಟೇಶ್, ಲಾಲ್ ಸಿಂಗ್ ನಾಯ್ಕ್, ವಿ. ಸಿದ್ದೇಶ್, ಎಸ್.ಸೋಮಶೇಖರ್, ಸಚಿನ್, ನಾಗೇಂದ್ರಪ್ಪ ಮತ್ತಿತರರು ಹಾಜರಿದ್ದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top