Connect with us

Dvgsuddi Kannada | online news portal | Kannada news online

ಮುಖ್ಯಮಂತ್ರಿ ಅಮೃತ ನಗರೋತ್ಥಾನ-4ನೇ ಹಂತದ ಕ್ರಿಯಾ ಯೋಜನೆ; ದಾವಣಗೆರೆ 70 ಕೋಟಿ ಕಾಮಗಾರಿಗೆ ಅನುಮೋದನೆ

ದಾವಣಗೆರೆ

ಮುಖ್ಯಮಂತ್ರಿ ಅಮೃತ ನಗರೋತ್ಥಾನ-4ನೇ ಹಂತದ ಕ್ರಿಯಾ ಯೋಜನೆ; ದಾವಣಗೆರೆ 70 ಕೋಟಿ ಕಾಮಗಾರಿಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಅಮೃತ ನಗರೋತ್ಥಾನ-4ನೇ ಹಂತದ ಕ್ರಿಯಾ ಯೋಜನೆಗೆ ಅನುಮೋದನೆ ಸಿಕ್ಕಿದ್ದು, ದಾವಣಗೆರೆಗೆ ಜಿಲ್ಲೆಗೆ 70 ಕೋಟಿ ಅನುದಾನ ದೊರಕಿದೆ.

ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ-4ನೇ ಹಂತದ 3 ನೇ ಸಮಿತಿ ಮತ್ತು ನಗರೋತ್ಥಾನ-3ನೇ ಹಂತದ ಯೋಜನೆಗಳ 18 ನೇ ರಾಜ್ಯಮಟ್ಟದ ಸಮಿತಿಯ ಸಭೆ ವಿಧಾನಸೌಧದಲ್ಲಿ ಇಂದು ಸಚಿವ ಎಂ.ಟಿ.ಬಿ. ನಾಗರಾಜು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.  ಈವೇಳೆ ನಗರ ಸ್ಥಳೀಯ ಸಂಸ್ಥೆಗಳ 2022-23ನೇ ಸಾಲಿನಿಂದ 2024-25ನೇ ಸಾಲಿನ ವರೆಗಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯ ಕ್ರಿಯಾ ಯೋಜನೆಗಳಿಗೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ.ನಾಗರಾಜ ಅವರು  ರಾಜ್ಯಮಟ್ಟದ ಸಮಿತಿಯಲ್ಲಿ ಅನುಮೋದನೆ ನೀಡಿದರು.

4ನೇ ಹಂತದ ಯೋಜನೆಯ ಈ ಕ್ರಿಯಾ ಯೋಜನೆಗಳಿಂದ ಮೈಸೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 75 ಕೋಟಿ ರೂಪಾಯಿ, ಕೊಡಗು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ 55 ಕೋಟಿ ರೂಪಾಯಿ, ಬಳ್ಳಾರಿ -80 ಕೋಟಿ ರೂಪಾಯಿ, ರಾಮನಗರ-125 ಕೋಟಿ ರೂಪಾಯಿ, ದಾವಣಗೆರೆ-70 ಕೋಟಿ ರೂಪಾಯಿ, ಬೆಳಗಾವಿ-260 ಕೋಟಿ ರೂಪಾಯಿ ಹಾಗು ಉಡುಪಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 40 ಕೋಟಿ ರೂಪಾಯಿಗಳ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ.

ರಾಜ್ಯದ 302 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ-4ನೇ ಹಂತದ ಯೋಜನೆಯಡಿ 3885 ಕೋಟಿ ರೂಪಾಯಿ ಮೊತ್ತದ ಕ್ರಿಯಾ ಯೋಜನೆಗೆ ರಾಜ್ಯ ಸಚಿವ ಸಂಪುಟ ಕಳೆದ ಜನವರಿಯಲ್ಲಿ ಅನುಮೋದನೆ ನೀಡಿತ್ತು.

ಇನ್ನು 3ನೇ ಹಂತದ ಯೋಜನೆಯಲ್ಲಿ ಉಳಿಕೆಯಾಗಿದ್ದ ಹಣದಲ್ಲಿ ಬೆಳಗಾವಿ,ರಾಮನಗರ, ಬಳ್ಳಾರಿ, ಚಿಕ್ಕಮಗಳೂರು,ಬಾಗಲಕೋಟೆ, ಉತ್ತರ ಕನ್ನಡ ಮತ್ತು ವಿಜಯನಗರ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಲ್ಲಿ ಬದಲಿ ಕಾಮಗಾರಿ ಕೈಗೊಳ್ಳಲು ಅನುಮೋದನೆ ನೀಡಿತು.

ಸಭೆಯಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ. ಅಜಯ್ ನಾಗಭೂಷಣ್,ಪೌರಾಡಳಿತ ಇಲಾಖೆ ನಿರ್ದೇಶಕರಾದ ಶ್ರೀಮತಿ ಅರ್ಚನಾ, ಮುಖ್ಯ ಎಂಜಿನಿಯರ್ ಸತ್ಯನಾರಾಯಣ ಸೇರಿದಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top