ನವದೆಹಲಿ: ಹರಿಹರ, ಮಲೆಬೆನ್ನೂರು, ಹೊನ್ನಾಳಿ, ಶಿವಮೊಗ್ಗ ನಡುವಿನ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಣೆ ಮಾಡುವಂತೆ ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ದಾವಣಗೆರೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ ಸಲ್ಲಿಸಿದ್ದಾರೆ.
ರಾಜ್ಯ ಹೆದ್ದಾರಿಯಾಗಿರುವ ಹರಿಹರ, ಮಲೆಬೆನ್ನೂರು, ಹೊನ್ನಾಳಿ, ಶಿವಮೊಗ್ಗ ರಸ್ತೆ ಮೇಲ್ದರ್ಜೆಗೆ ಏರಿಸುವಂತೆ ಬಹಳ ದಿನದ ಬೇಡಿಕೆಯಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರ ಹಲವು ಬಾರಿ ಮನವಿ ಸಲ್ಲಿಸಿದೆ. ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರಿದರು.
ಇನ್ನೂ ಮೂಡಿಗೆರೆ- ಹೊಳಲ್ಕೆರೆ ನಡುವೆ ರಾಷ್ಟ್ರೀಯ ಹೆದ್ದಾರಿ 73 ಅನ್ನು ಆನಗೋಡು ತನಕ ಮೇಲ್ದರ್ಜೆಗೆ ಏರಿಸಬೇಕು. ಈ ಹೆದ್ದಾರಿ 146 ಕಿ.ಮೀ ಇದೆ. ಹೊಳಲ್ಕೆರೆಯಿಂದ ಆನಗೋಡು ನಡುವಿನ 46 ಕಿ.ಮೀ.ಯನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಘೋಷಿಸಿಲ್ಲ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.



