ದಾವಣಗೆರೆ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಇಂದು (ಆ.26) ಬೆಳಿಗ್ಗೆ 10.30ಕ್ಕೆ ಜಗಳೂರು ತಾಲ್ಲೂಕು ತಹಶೀಲ್ದಾರ್ ರವರು ಬಿಳಚೋಡು ಹೋಬಳಿಯ ಪಲ್ಲಾಗಟ್ಟೆ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಪಾಲ್ಗೊಳ್ಳಲಿರುವುದರಿಂದ ಸಾರ್ವಜನಿಕರ ಕುಂದು ಕೊರತೆಯನ್ನು ಸ್ಥಳದಲ್ಲಿಯೇ ಪರಿಹರಿಸಲು ಅನುವಾಗುವಂತೆ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಪ್ರಕಟಣೆ ತಿಳಿಸಿದೆ.



