ದಾವಣಗೆರೆ: ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಪೌಷ್ಟಿಕ ಆಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಅಂಗನವಾಡಿ ಕೇಂದ್ರಗಳಲ್ಲಿ ಗರ್ಭಿಣಿ, ಬಾಣಂತಿಯರಿಗೆ ಮತ್ತು ಮಕ್ಕಳಿಗೆ ಉತ್ತಮ ಗುಣಮಟ್ಟದ ಹಾಗೂ ಪೋಷಕಾಂಶಯುತ ಆಹಾರ ಪದಾರ್ಥವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರಕ ಪೌಷ್ಟಿಕ ಆಹಾರ ಪದಾರ್ಥಗಳ ದರ ನಿಗದಿಗಾಗಿ ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳು, ಬಾಣಂತಿಯರು ಹಾಗೂ ಗರ್ಭಿಣಿಯರು ಅಪೌಷ್ಟಿಕತೆಗೆ ತುತ್ತಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ. ಆದ್ದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಗುಣಮಟ್ಟದ ಪೌಷ್ಟಿಕ ಅಹಾರ ಹಾಗೂ ಕಡ್ಡಾಯವಾಗಿ ಮೊಳಕೆ ಕಟ್ಟಿದ ಕಾಳುಗಳನ್ನೆ ನೀಡಬೇಕು ಪೌಷ್ಟಿಕಾಂಶದ ಕೊರತೆ ಉಂಟಾದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಕ್ರಮ ವಹಿಸಬೇಕು ಎಂದರು.

ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿದಿನ ಮಧ್ಯಾಹ್ನ ಗರ್ಭಿಣಿಯರಿಗೆ, ಬಾಣಂತಿಯರಿಗೆ ನೀಡುತ್ತಿರುವ ಹಾಲಿನ ಬದಲಾಗಿ ಮೊಸರು ಮಾಡಿಕೊಟ್ಟರೆ ಅವರಲ್ಲಿ ಜೀರ್ಣ ಕ್ರಿಯೆಗೆ ಉಪಯುಕ್ತವಾಗುತ್ತದೆ. ಪ್ರತಿ ತಿಂಗಳ ಮೂರನೇ ಶನಿವಾರದಂದು ಸ್ಥಳೀಯರ ಸಹಾಯದಿಂದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಮಮತೆಯ ಕೈತುತ್ತು ಎಂಬ ಶೀರ್ಷಿಕೆಯಡಿಯಲ್ಲಿ ಪೌಷ್ಟಿಕ ಪದಾರ್ಥಗಳನ್ನು ಒಳಗೊಂಡ ಆಹಾರವನ್ನು ನೀಡಲು ಕ್ರಮವಹಿಸಬೇಕು.

ಎಲ್ಲಾ ಅಂಗನವಾಡಿ ಕೇಂದ್ರಗಳಲ್ಲಿ ಕೈತೋಟ ನಿರ್ಮಿಸಿ, ಅಕ್ಷಯ ಪಾತ್ರೆಗಳನ್ನಿಟ್ಟು ಸ್ಥಳೀಯವಾಗಿ ಬೆಳೆಯುವಂತಹ ತರಕಾರಿ, ಧಾನ್ಯಗಳನ್ನು ಬಳಸಿ ಆಹಾರ ಪದಾರ್ಥವನ್ನು ತಯಾರಿಸಿ ಗರ್ಭಿಣಿಯರಿಗೆ ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ನೀಡಬೇಕು. ಅಂಗನವಾಡಿಗಳಲ್ಲಿ ದೈನಂದಿನ ತಯಾರಿಸುವ ಆಹಾರಗಳ ಪದಾರ್ಥಗಳ ಬದಲಾಗಿ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಕೊಡಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ವಾಸಂತಿ ಉಪ್ಪಾರ್, ಜಿಲ್ಲಾ ಸಹಕಾರ ಸಂಘಗಳ ಉಪ ನಿರ್ಬಂದಕರಾದ ಎಸ್. ಮಂಜುಳಾ ಹಾಗೂ ತಾಲ್ಲೂಕು ಮಟ್ಟದ ಶಿಶು ಯೋಜನಾಧಿಕಾರಿಗಳು ಉಪಸ್ಥಿತರಿದ್ದರು.

ದಾವಣಗೆರೆ: ಹೊಸ ರಾಶಿ ಅಡಿಕೆ 1, 200 ರೂ. ಏರಿಕೆ; ಹಳೆಯ ಅಡಿಕೆ 2 ಸಾವಿರ ಕುಸಿತ..!

 

ಭದ್ರಾ ನಾಲೆ ನೀರು ಸ್ಥಗಿತ: ಮಲೇಬೆನ್ನೂರು ನೀರಾವರಿ ಇಲಾಖೆ ಕಚೇರಿ ಎದುರು ರೈತರ ಪ್ರತಿಭಟನೆ; ರಸ್ತೆ ತಡೆದು ಆಕ್ರೋಶ; ಬೆಂಗಳೂರಲ್ಲಿ ಕಾಟಾಚಾರದ ಸಭೆ

ದಾವಣಗೆರೆ: ಸೆ. 20 ರಿಂದ ಮುಂದಿನ 3 ತಿಂಗಳ ಡಿಎಲ್ ಸ್ಲಾಟ್ ಓಪನ್; ಬೇಕಾದ ದಿನಾಂಕ ಇಂದೇ ಕಾಯ್ದಿರಿಸಿಕೊಳ್ಳಿ…!

 

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸೆ.21ರಂದು ಉದ್ಯೋಗ ಮೇಳ

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *