Connect with us

Dvgsuddi Kannada | online news portal | Kannada news online

ದಾವಣಗೆರೆ: ಗೃಹಭಾಗ್ಯ ಯೋಜನೆಯಡಿ ಮೂರು ತಿಂಗಳಲ್ಲಿ ನಗರದ ಹೊರವಲಯದಲ್ಲಿ ನಿರ್ಮಿಸುತ್ತಿರುವ ಮನೆಗಳ ಹಂಚಿಕೆ

home

ಪ್ರಮುಖ ಸುದ್ದಿ

ದಾವಣಗೆರೆ: ಗೃಹಭಾಗ್ಯ ಯೋಜನೆಯಡಿ ಮೂರು ತಿಂಗಳಲ್ಲಿ ನಗರದ ಹೊರವಲಯದಲ್ಲಿ ನಿರ್ಮಿಸುತ್ತಿರುವ ಮನೆಗಳ ಹಂಚಿಕೆ

ದಾವಣಗೆರೆ: ನಗರಗಳ ಸ್ವಚ್ಚತೆಯ ರೂವಾರಿಗಳಾದ ಮ್ಯಾನುಯೆಲ್ ಸ್ಕ್ಯಾವೆಂಜರ್‍ಗಳಿಗೆ ನಗರ ಆಶ್ರಯ ಯೋಜನೆಗಳಲ್ಲಿ ಪ್ರಥಮಾದ್ಯತೆ ದೊರಕಬೇಕೆಂದು ಜಿಲ್ಲಾ ಮಟ್ಟದ ಸಭೆಯಲ್ಲಿ ತೀರ್ಮಾನಿಸಿರುವುದಾಗಿ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ನಡೆದ ಮ್ಯಾನುಯೆಲ್ ಸ್ಕ್ಯಾವೆಂಜರ್‍ಗಳ ಸಭೆಯಲ್ಲಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಮ್ಯಾನುಯೆಲ್ ಸ್ಕ್ಯಾವೆಂಜರ್‍ಗಳಿಗೆ ಆಶ್ರಯ ಯೋಜನೆಯಡಿ ಮನೆ ನೀಡಲು ನಿವೇಶನ ಲಭ್ಯವಿಲ್ಲದಿದ್ದಲ್ಲಿ ಅಕ್ಕಪಕ್ಕದ ಪಂಚಾಯತಿಗಳ ವ್ಯಾಪ್ತಿಯಲ್ಲಿ ನಿವೇಶನಗಳು ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಬೇಕು ಎಂದರು.

ಸಫಾಯಿ ಕರ್ಮಚಾರಿಗಳಿಗೂ ಬ್ಯಾಂಕುಗಳಲ್ಲಿ ಆದ್ಯತೆಯ ಮೇಲೆ ಸಾಲ ನೀಡಲು ಬಾಂಕುಗಳು ಸಹಕರಿಸಬೇಕು. ಈಗಾಗಲೇ ನಗರದ ಹೊರವಲಯದಲ್ಲಿ ಗೃಹಭಾಗ್ಯ ಯೋಜನೆಯಡಿ ನಿರ್ಮಿಸಲಾಗಿರುವ ಮನೆಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಪೌರಕಾರ್ಮಿಕರಿಗೆ ವಿತರಿಸಲು ಪಾಲಿಕೆಯಿಂದ ಗುತ್ತಿಗೆದಾರರಿಗೆ ಸೂಚಿಸಲು ತಿಳಿಸಿದ ಅವರು, ಈ ಮೂರು ವರ್ಗಗಳ ಕಾರ್ಮಿಕರಿಗೆ ಆದ್ಯತೆಯ ಮೇಲೆ ಸೌಲಭ್ಯಗಳನ್ನು ನೀಡಲು ಸಂಭಂಧಿಸಿದ ಇಲಾಖೆಗಳು ಕ್ರಮವಹಿಸಬೇಕೆಂದರು.

ಪಾಲಿಕೆ ಅಧಿಕಾರಿ ಮಾಹಿತಿ ನೀಡಿ ಗುತ್ತಿಗೆದಾರರುರ 3 ತಿಂಗಳ ಕಾಲಾವಕಾಶ ಕೇಳಿದ್ದು, ಮೇ ಅಂತ್ಯದೊಳಗೆ ಮುಗಿಸುವುದಾಗಿ ಹೇಳಿದ್ದಾರೆಂದರು, ಜಿಲ್ಲಾಧಿಕಾರಿಗಳು ಸಪಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರು ಬಂದಾಗ ಡಿಸೆಂಬರ್ ಅಂತ್ಯದೊಳಗೆ ಮುಗಿಸುವುದಾಗಿ ಹೇಳಿದ್ದರು, ಬೇಗನೆ ಕೆಲಸ ಮುಗಿಸಲು ಅವರಿಗೆ ಸೂಚಿಸಿ ಎಂದರು.

ಸಫಾಯಿ ಕರ್ಮಚಾರಿ ನಿಗಮದ ಅಧಿಕಾರಿ ಮಾಹಿತಿ ನೀಡಿ, ಈಗಾಗಲೆ 3 ಜನ ಮ್ಯಾನುಯೆಲ್ ಸ್ಕ್ಯಾವೆಂಜರ್ ಗಳಿಗೆ ಮನೆ ನೀಡಲಾಗಿದೆ. 7 ಜನ ನಿವೇಶನಕ್ಕಾಗಿ ಅರ್ಜಿ ನೀಡಿದ್ದಾರೆ ಅವರುಗಳಿಗೆ ನಿವೇಶನ ನೀಡಲು ಸಂಭಂಧಿಸಿದ ಗ್ರಾ.ಪಂಗಳಿಗೆ ತಿಳಿಸಲಾಗಿದೆ, ನಿಗಮದಿಂದ 79 ಜನರಿಗೆ ತಲಾ 2 ಲಕ್ಷ ರೂ. ಸಾಲ ನೀಡಲಾಗಿದೆ. 5 ಜನರಿಗೆ ವಾಹನ ಖರೀದಿಗೆ 5 ಲಕ್ಷ ರೂ. ನೀಡಿದ್ದು ಅವರು ವಾಹನಗಳನ್ನು ಖರೀದಿಸಿದ್ದಾರೆ. ಗ್ರಾಮೀಣ ಭಾಗದಲ್ಲಿ ನಿಗಮದಿಂದ ಸಾಲ ಪಡೆದ ಕೆಲವರು ಕುರಿ ಸಾಕಾಣಿಕೆ ಮಾಡುತ್ತಿದ್ದಾರೆಂದರು.

ಸಮಿತಿ ಸದಸ್ಯ ಹುಚ್ಚೆಂಗಪ್ಪ ಮಾತನಾಡಿ ನಮ್ಮ ತಂದೆಯವರ ಕಾಲದಲ್ಲಿ ನೀಡಲಾದ ನಿವೇಶನಗಳಲ್ಲಿ ನಾಲ್ಕೈದು ಅಣ್ಣತಮ್ಮಂದಿರು ವಾಸಿಸುತ್ತಿದ್ದು ನಮಗೆ ಮತ್ತೊಮ್ಮೆ ನಿವೇಶನಗಳನ್ನು ನೀಡಿ ಎಂದರು.

ಸಫಾಯಿ ಕರ್ಮಚಾರಿಗಳ ಸಂಘದ ಮುಖಂಡರು ಮಾತನಾಡಿ, ಸಪಾಯಿ ಕರ್ಮಚಾರಿಗಳಿಗೆ ಕೇಂದ್ರ ಸರ್ಕಾರದಿಂದ ಹಲವಾರು ಸೌಲಭ್ಯಗಳಿದ್ದು 5 ಲಕ್ಷದಿಂದ 50 ಲಕ್ಷ ರೂ.ಗಳವರಗೆ ಸಾಲ ಸೌಲಭ್ಯಗಳಿದ್ದು ಕೇಂದ್ರದ ಯೋಜನೆಗಳು ರಾಜ್ಯದಲ್ಲಿ ಸಿಗುವಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ,್ಲ ಹೊನ್ನಾಳಿ ಉಪವಿಭಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ಲೀಡ್ ಬ್ಯಾಂಕ್ ಮ್ಯಾನೇಜರ್ ಸುಶೃತ್ ಶಾಸ್ತ್ರಿ, ಮುಖಂಡರಾದ ನೀಲಗಿರಿಯಪ್ಪ, ಶಂಕರ್, ರಂಗಮ್ಮ, ಶಾಂತಮ್ಮ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಇದ್ದರು.

 

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top