ದಾವಣಗೆರೆ: ನ್ಯಾಯಬೆಲೆ ಅಂಗಡಿಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ; ತೂಕದಲ್ಲಿ ವಂಚಿಸಿದ ಅಂಗಡಿ ಅಮಾನತು ಮಾಡಿ ಸ್ಥಳದಲ್ಲೇ ಆದೇಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ ಪ್ರಕರಣದಡಿ ಸ್ಥಳದಲ್ಲೇ ನ್ಯಾಯಬೆಲೆ ಅಂಗಡಿ ಅಮಾನತು ಮಾಡಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ನೀಡಿದ್ದಾರೆ.

ಜಿಲ್ಲಾಧಿಕಾರಿಯವರು ಆಗಸ್ಟ್ 31 ರಂದು ಹೊನ್ನಾಳಿಗೆ ಭೇಟಿ ನೀಡಿ ದುರಸ್ಥಿಯಾದ ಕಾಲುವೆ ವೀಕ್ಷಣೆಯಾಗಿ ಬಸವನಹಳ್ಳಿ ಮಾರ್ಗವಾಗಿ ತೆರಳಿದ್ದಾರೆ. ಅಲ್ಲಿ ನ್ಯಾಯಬೆಲೆ ಅಂಗಡಿ ನೋಡಿದ ಜಿಲ್ಲಾಧಿಕಾರಿಯವರು ತಮ್ಮ ವಾಹನ ನಿಲ್ಲಿಸಿ ಅಂಗಡಿಗೆ ತೆರಳಿದಾಗ ಅಲ್ಲಿ ಓರ್ವ ಮಹಿಳೆ ಪಡಿತರ ಧಾನ್ಯಗಳನ್ನು ಪಡೆದುಕೊಂಡಿದ್ದರು. ಅವರನ್ನು ಮಾತನಾಡಿಸಿ ನಿಮ್ಮ ಮನೆಯಲ್ಲಿ ಎಷ್ಟು ಸದಸ್ಯರಿದ್ದಾರೆ, ಎಷ್ಟು ಆಹಾರಧಾನ್ಯ ನೀಡುತ್ತಿದ್ದಾರೆ ಎಂದು ಮಾಹಿತಿ ಪಡೆದುಕೊಂಡರು. ಮಹಿಳೆ ಮೂರು ಕೆ.ಜಿ.ಅಕ್ಕಿ ಹಾಗೂ 2 ಕೆ.ಜಿ ರಾಗಿ ಪಡೆಯಲಾಗಿದೆ ಎಂದಾಗ ತೂಕದ ನಿಖರತೆ ಪರೀಕ್ಷೆ ಮಾಡಲು ಮರು ತೂಕ ಮಾಡಲು ತಿಳಿಸಿದರು.

ಒಟ್ಟು ಆಹಾರ ಧಾನ್ಯ ಐದು ಕೆಜಿ ನೀಡಬೇಕಿದ್ದು ಇದು 4 ಕೆಜಿ 300 ಗ್ರಾಂ ತೂಕ ಮಾತ್ರ ಬಂದಿದೆ. ಪಡಿತರರಿಗೆ 700 ಗ್ರಾಂ ತೂಕದಲ್ಲಿ ಮೋಸ ಮಾಡಲಾಗಿದೆ ಎಂದು ಅರಿತ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿಯವರು ಸ್ಥಳದಲ್ಲಿಯೇ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿ ಈ ನ್ಯಾಯಬೆಲೆ ಅಂಗಡಿಯನ್ನು ಅಮಾನತು ಮಾಡಲು ಸೂಚನೆ ನೀಡಿದರು. ಈ ವೇಳೆ ಹೊನ್ನಾಳಿ ಉಪವಿಭಾಗಾಧಿಕಾರಿ ಅಭಿಷೇಕ್ ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *