Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿಂದು 700 ಕೊರೊನಾ ಕೇಸ್ ಬರುವ ಸಾಧ್ಯತೆ; ಎಸ್.ಎಸ್. ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ದಾವಣಗೆರೆ

ದಾವಣಗೆರೆಯಲ್ಲಿಂದು 700 ಕೊರೊನಾ ಕೇಸ್ ಬರುವ ಸಾಧ್ಯತೆ; ಎಸ್.ಎಸ್. ಆಸ್ಪತ್ರೆಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ

ದಾವಣಗೆರೆ: ಇಎಸ್ ಐ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ  80 ಬೆಡ್ ವ್ಯವಸ್ಥೆ ಪರಿಶೀಲನೆ ನಂತರ  ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು, ಅನಿರೀಕ್ಷಿತವಾಗಿ ಎಸ್.ಎಸ್.ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಆಸ್ಪತ್ರೆಯ ಎಂಐಸಿಯು, ಐಸೋಲೇಷನ್ ಹಾಗೂ ಐಸಿಯು ವಾರ್ಡ್‍ಗಳಿಗೆ ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಗಳ ಕುರಿತು ವೈದ್ಯರ ಬಳಿ ಮಾಹಿತಿ ಪಡೆದುಕೊಂಡರು.

ಎಸ್.ಎಸ್.ಆಸ್ಪತ್ರೆಯು ಕೋವಿಡ್ ಸೋಂಕಿತ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು ಹೆಚ್ಚು ಸೋಂಕಿತರು ಗುಣಮುಖರಾಗುತ್ತಿದ್ದಾರೆ. ಗುಣಮುಖರಾದ ರೋಗಿಗಳನ್ನು ಆದಷ್ಟು ಬೇಗ ಬಿಡುಗೊಡೆಗೊಳಿಸಿ ಅಗತ್ಯವಿರುವ ಅಥವಾ ತುರ್ತು ಇರುವ ರೋಗಿಗಳಿಗೆ ಐಸಿಯು ಬೆಡ್‍ಗಳನ್ನು ನೀಡಬೇಕು. ಇಂದು ಐಸಿಎಂಆರ್ ಪೋರ್ಟಲ್‍ನಲ್ಲಿ 700 ಕ್ಕೂ ಹೆಚ್ಚು ಸೋಂಕಿತರು ಬರುವ ನಿರೀಕ್ಷೆ ಇದೆ. ಹಾಗಾಗಿ ಬೆಡ್ ವಿಸ್ತರಣೆ ಅನಿವಾರ್ಯವಾಗಿದ್ದು, ಆಸ್ಪತ್ರೆಯಲ್ಲಿ ಬೆಡ್, ಆಕ್ಸಿಜನ್ ಸೇರಿದಂತೆ ಎಲ್ಲಾ ಸವಲತ್ತುಗಳ ಸಾಮಥ್ರ್ಯವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಆಸ್ಪತ್ರೆಯಲ್ಲಿ ಆಕ್ಸಿಜನ್ ದುರ್ಬಳಕೆ ತಡೆಗಟ್ಟಲು ಆಕ್ಸಿಜನ್ ಆಡಿಟ್ ಮಾಡಿಸಲಾಗುತ್ತಿದ್ದು, ಇದರಿಂದ ಅನಗತ್ಯವಾಗಿ ಬಳಕೆಯಾಗುವ ಆಕ್ಸಿಜನ್ ಉಳಿಸಿ ಅಗತ್ಯವಿರುವವರಿಗೆ ಆಕ್ಸಿಜನ್ ನೀಡಬಹುದು. ಇದರಿಂದ ಎಸ್.ಎಸ್.ಆಸ್ಪತ್ರೆಯವರು ಕೂಡ ಪ್ರತಿನಿತ್ಯ ಆಕ್ಸಿಜನ್ ಆಡಿಟ್ ವರದಿಯನ್ನು ಜಿಲ್ಲಾಡಳಿತಕ್ಕೆ ವರದಿ ನೀಡಬೇಕು ಎಂದು ತಿಳಿಸಿದರು.

ಆಸ್ಪತ್ರೆಯ ಕೊಠಡಿಗಳು ಹಾಗೂ ಹೊರ ಆವರಣ ಸ್ವಚ್ಛತೆಯಿಂದ ಕೂಡಿದ್ದು ಎಲ್ಲಾ ವಾರ್ಡ್‍ಗಳನ್ನು ಆಗಾಗ ಸ್ಯಾನಿಟೈಸ್ ಮಾಡಬೇಕು. ಹಾಗೂ ಜಿಲ್ಲಾಸ್ಪತ್ರೆಯಿಂದ ರೆಫೆರ್ ಮಾಡಿದ ಕೋವಿಡ್ ಸೋಂಕಿತ ರೋಗಿಗಳನ್ನು ದಾಖಲು ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಎಸ್.ಎಸ್.ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ಪ್ರಸಾದ್, ವೈದ್ಯಕೀಯ ಅಧೀಕ್ಷಕ ಡಾ.ಕಾಳಪ್ಪನವರ್ ಸೇರಿದಂತೆ ಮತ್ತಿತರರು ಇದ್ದರು.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top