Connect with us

Dvgsuddi Kannada | online news portal | Kannada news online

ದಾವಣಗೆರೆ: ಟಿವಿ ಸ್ಟೇಷನ್ ಕೆರೆ ನೀರು ಸಂಗ್ರಹ ವೀಕ್ಷಿಸಿದ ಡಿಸಿ; ನೀರಿನ ಮಿತ ಬಳಕೆಗೆ ಸೂಚನೆ

ದಾವಣಗೆರೆ

ದಾವಣಗೆರೆ: ಟಿವಿ ಸ್ಟೇಷನ್ ಕೆರೆ ನೀರು ಸಂಗ್ರಹ ವೀಕ್ಷಿಸಿದ ಡಿಸಿ; ನೀರಿನ ಮಿತ ಬಳಕೆಗೆ ಸೂಚನೆ

ದಾವಣಗೆರೆ: ದಾವಣಗೆರೆ ನಗರಕ್ಕೆ ಕುಡಿಯುವ ನೀರು ಒದಗಿಸಲು ಟಿವಿ ಸ್ಟೇಷನ್ ಕೆರೆಯನ್ನು ಭರ್ತಿ ಮಾಡಿ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಕೆರೆಯಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿ 4 ಅಡಿಗೆ ಕುಸಿದಿದ್ದು ಮುಂದಿನ 15 ದಿನಗಳಿಗಾಗುವಷ್ಟು ನೀರಿನ ಸಂಗ್ರಹವಿರುತ್ತದೆ. ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರು ಸಂಗ್ರಹ ಮಾಡಿ ಬೇಸಿಗೆಯಲ್ಲಿ ತೊಂದರೆಯಾಗದಂತೆ ಭದ್ರಾ ಕಾಲುವೆ ಮೂಲಕ ನೀರು ತುಂಬಿಸಲಾಗುತ್ತಿದೆ. ನೀರಿನ ಪ್ರಮಾಣ ಎಷ್ಟು ಬರುತ್ತಿದೆ, ಮುಂದಿನ ಎಷ್ಟು ದಿನಗಳು ನೀರು ಪೂರೈಕೆ ಮಾಡಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಅವರು ಮಾರ್ಚ್ 27 ರಂದು ಪಾಲಿಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕೆರೆಯಲ್ಲಿ ನೀರು 9 ಮೀಟರ್ ಇರಬೇಕಾಗಿದ್ದು ಪ್ರಸ್ತುತ 4 ಅಡಿ ಇರುತ್ತದೆ. ಕೆರೆಗೆ ಮುಂದಿನ ದಿನಗಳಿಗಾಗುವಷ್ಟು ನೀರು ಸಂಗ್ರಹ ಮಾಡಲು ಸೂಚನೆ ನೀಡಿದ ಅವರು ಜನರು ಸಹ ಬೇಸಿಗೆ ಕಳೆಯುವ ವರೆಗೆ ನೀರಿನ ಮಿತ ಬಳಕೆ ಮಾಡಬೇಕೆಂದು ಮನವಿ ಮಾಡಿದ್ದಾರೆ. ಪಾಲಿಕೆ ಆಯುಕ್ತರಾದ ರೇಣುಕಾ, ಡಿಯುಡಿಸಿ ಯೋಜನಾ ನಿರ್ದೇಶಕ ಮಹಾಂತೇಶ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top